: ಈ ವಿದ್ಯಾರ್ಥಿ ವೇತನಗಳ ಬಗ್ಗೆ ನಿಮಗೆ ಮಾಹಿತಿ ಇದೆಯೇ? ತಪ್ಪದೇ ಇಂದೇ ಅರ್ಜಿ ಹಾಕಿ *ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಹಲವು ವಿದ್ಯಾರ್ಥಿವೇತನಗಳು*ಈ ಡಿಸೆಂಬರ್-ಜನವರಿ ತಿಂಗಳಲ್ಲಿ ಅರ್ಜಿ ಸಲ್ಲಿಸಬಹುದಾದ ಸ್ಕಾಲರ್‌ಶಿಪ್*ವಿಶೇಷವಾಗಿ ಕೋವಿಡ್‌ ಪೀಡಿತ ಕುಟುಂಬಗಳಿಗೆ ಹೆಚ್ಚಿನ ನೆರವು ನಿರೀಕ್ಷಿತ ಬೆಂಗಳೂರು(ಡಿ.23):ಬಡ ವರ್ಗದ ಮಕ್ಕಳಿಗೆ ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ ಶಿಪ್ ಅನ್ನೋದು ಅತ್ಯಂತ ಸಹಕಾರಿ. ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಒಂದೊಂದೇ ಮೆಟ್ಟಿಲು ಏರಿ ಸಾಧನೆಯ ಶಿಖರ ತಲುಪಲು ಆರ್ಥಿಕ ನೆರವು ಅತ್ಯಗತ್ಯ. ಈ ನಿಟ್ಟಿನಲ್ಲಿ ಯೋಗ್ಯವಾದ ವಿದ್ಯಾರ್ಥಿವೇತನ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಬಲ್ಲವು. ಇತ್ತೀಚಿನ ಕೆಲ ವರ್ಷಗಳಲ್ಲಿ ವಿಶೇಷವಾಗಿ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯಿಂದಾಗಿ ಆರ್ಥಿಕ ನೆರವು ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಪೋಷಕರು, ಗಳಿಸುವ ಸದಸ್ಯರನ್ನು ಕಳೆದುಕೊಂಡಿರುವ ಅಥವಾ ಅವರ ಕುಟುಂಬದ ಸದಸ್ಯರು ತಮ್ಮ ಉದ್ಯೋಗವನ್ನು ಕಳೆದುಕೊಂಡಿರುವ ಅದೆಷ್ಟೋ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದಾರಿದೀಪವಾಗಬಲ್ಲದು. ಈ ವರ್ಷ ಅಂಥ ಬಡ ಮಕ್ಕಳಿಗೆ ನೆರವಾಗುವ ಪ್ರಮುಖ ನಾಲ್ಕು ವಿದ್ಯಾರ್ಥಿ ವೇತನಗಳ ಬಗ್ಗೆ ನಾವು ನಿಮಗೆ ತಿಳಿಸುತ್ತಿದ್ದೇವೆ. ಈ ಎರಡು ತಿಂಗಳಲ್ಲಿ ನೀವು ಅಪ್ಲೈ ಮಾಡಬಹುದು. ಕದಮ್ ವಿದ್ಯಾರ್ಥಿವೇತನ:ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಬಧ್ತೆ ಕದಮ್ ಸ್ಕಾಲರ್‌ಶಿಪ್ 2021-22 ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು 9 ನೇ ತರಗತಿಯಿಂದ ಪದವಿ ಹಂತದವರೆಗೆ ಶಿಕ್ಷಣ ಮುಂದುವರಿಸಲು ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಆರ್ಥಿಕ ‌ನೆರವು ಸಿಗಲಿದೆ. ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಪೋಷಕರು/ಗಳಿಸುವ ಸದಸ್ಯರನ್ನು ಕಳೆದುಕೊಂಡಿರುವ ಅಥವಾ ಅವರ ಕುಟುಂಬದ ಸದಸ್ಯರು ತಮ್ಮ ಉದ್ಯೋಗವನ್ನು ಕಳೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ‌ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ ಮೂಲ 6 ಲಕ್ಷ ರೂ.ಗಿಂತ ಹೆಚ್ಚಿರಬಾರದು. ಅರ್ಜಿ ಸಲ್ಲಿಸಲು 15-02-2022 ಕೊನೆಯ ದಿನಾಂಕವಾಗಿದೆ. : ವಿದ್ಯಾರ್ಥಿ ವೇತನಕ್ಕೆ ಫೌಂಡೇಶನ್ ಅರ್ಜಿ ಆಹ್ವಾನ, UGಗೆ 4ಲಕ್ಷ, ಪೋಸ್ಟ್-ಡಾಕ್ಟರಲ್ ಫೆಲೋಶಿಪ್:( () - (ಅಧ್ಯಯನಗಳಿಗೆ ಗಾಂಧಿನಗರ ಭೌತಶಾಸ್ತ್ರ ವಿಭಾಗ (ಪಿಡಿ) ಪೋಸ್ಟ್-ಡಾಕ್ಟರಲ್ ಫೆಲೋಶಿಪ್ (ಪಿಡಿಎಫ್) , ಪಿಎಚ್‌ಡಿ ಪದವಿ ಹೊಂದಿರುವವರಿಗೆ ನೀಡುವ ಸಂಶೋಧನಾ ಅವಕಾಶವಾಗಿದೆ. ಈ ಫೆಲೋಶಿಪ್, ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆಯಲು ಮುಂದಾಗಿರುವ ಅಭ್ಯರ್ಥಿಗಳಿಗೆ ಸೂಕ್ತವಾಗಿದೆ. ಈ ಫೆಲೋಸಿಪ್ ನಡಿ ತಿಂಗಳಿಗೆ 50,000ರೂ. ಸಿಗಲಿದೆ. ಅರ್ಜಿ ಸಲ್ಲಿಸಲು 31-12-2021ಕೊನೆಯ ದಿನಾಂಕವಾಗಿದೆ. ಆನ್‌ಲೈನ್ ಅಪ್ಲಿಕೇಶನ್‌ಗಳು ಮಾತ್ರ ಸ್ವೀಕರಿಸಲಾಗುತ್ತಿದೆ.ಇಂಡಿಯಾ ಮೆರಿಟೋರಿಯಸ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2021 ( ):ಶ್ರೀರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪನಿ () ಲಿಮಿಟೆಡ್ ವಾಣಿಜ್ಯ ಸಾರಿಗೆ ಚಾಲಕರ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಕಟಿಸಿದೆ.ಈ ಕಾರ್ಯಕ್ರಮದ ಅಡಿಯಲ್ಲಿ, ಆಯ್ದ ವಿದ್ಯಾರ್ಥಿಗಳು 10 ನೇ ತರಗತಿ ಮತ್ತು 12 ನೇ ತರಗತಿಯ ನಂತರ ವೃತ್ತಿಪರ ಅಧ್ಯಯನಕ್ಕಾಗಿ ಬಹು-ವರ್ಷದ ವಿದ್ಯಾರ್ಥಿವೇತನವನ್ನು ಪಡೆಯಬಹುದು.ಪ್ರಸ್ತುತ ಡಿಪ್ಲೊಮಾ/ಐಟಿಐ/ಪಾಲಿಟೆಕ್ನಿಕ್ ಕೋರ್ಸ್‌ಗಳು ಅಥವಾ ಪದವಿ/ಇಂಜಿನಿಯರಿಂಗ್ ಕೋರ್ಸ್ ಗಳಿಗೆ ದಾಖಲಾದ ವಿದ್ಯಾರ್ಥಿಗಳು 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿದ್ದರೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ವಾರ್ಷಿಕ 4 ಲಕ್ಷಕ್ಕಿಂತ ಕಡಿಮೆ ಕುಟುಂಬದ ಒಟ್ಟಾರೆ ಆದಾಯ ಹೊಂದಿರುವ ವಾಣಿಜ್ಯ ಸಾರಿಗೆ ಚಾಲಕರ ಕುಟುಂಬದಿಂದ ಬಂದ ಅರ್ಜಿದಾರರು ಅರ್ಜಿ ಸಲ್ಲಿಸಬೇಕು. /ಪಾಲಿಟೆಕ್ನಿಕ್/ಡಿಪ್ಲೊಮಾ ಅಧ್ಯಯನಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 15,000ರೂ. ಮತ್ತು ಪದವಿ/ಎಂಜಿನಿಯರಿಂಗ್ ಅಧ್ಯಯನಕ್ಕಾಗಿ ವರ್ಷಕ್ಕೆ 35,000ರೂ. ವಿದ್ಯಾರ್ಥಿವೇತನ ಸಿಗಲಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ ೩೧ ಕೊನೆಯ ದಿನಾಂಕವಾಗಿದೆ. ವಿರ್ಚೋ ವಿದ್ಯಾರ್ಥಿವೇತನ ಕಾರ್ಯಕ್ರಮ 2021:ವಿರ್ಚೋ ವಿದ್ಯಾರ್ಥಿವೇತನ ( ) ಕಾರ್ಯಕ್ರಮ 2021 ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿನಿಯರಿಗೆ ಅವರ ಮುಂದಿನ ಶಿಕ್ಷಣವನ್ನು ಬೆಂಬಲಿಸಲು ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ 10 ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಪ್ರಸ್ತುತ 11 ನೇ ತರಗತಿ ಅಥವಾ ಸರ್ಕಾರಿ ಶಾಲೆಗಳು/ಕಾಲೇಜುಗಳಿಂದ ಡಿಪ್ಲೊಮಾ/ಪದವಿ ಓದುತ್ತಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆಯಿರಬೇಕು. ವರ್ಷಕ್ಕೆ 15,000ರೂ. ವರೆಗೆ ಸ್ಕಾಲರ್ ಶಿಪ್ ದೊರೆಯಲಿದೆ. ಅರ್ಜಿ ಸಲ್ಲಿಸಲು 31-12-2021ಕೊನೆಯ ದಿನಾಂಕವಾಗಿದೆ. 2021-22: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ