ಝೆಲೆನ್ಸ್ಕಿ ಪ್ರಧಾನಿ ಚರ್ಚೆ
ನವದೆಹಲಿ,ಸೆ.೨೪-ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮತ್ತೊಮ್ಮೆ ದ್ವಿಪಕ್ಷೀಯ ಸಭೆ ನಡೆಸಿದರು.
ಈ ತಿಂಗಳ ಎರಡನೇ ಬಾರಿಗೆ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಕಳೆದ ತಿಂಗಳು ಉಕ್ರೇನ್‌ಗೆ ನನ್ನ ಭೇಟಿಯ ಫಲಿತಾಂಶಗಳ ಕಾರ್ಯಗತಗೊಳಿಸುವ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಉಕ್ರೇನ್‌ನಲ್ಲಿನ ಸಂಘರ್ಷದ ಆರಂಭಿಕ ಪರಿಹಾರ ಮತ್ತು ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಲಾಯಿತು ”ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತ- ಉಕ್ರೇನ್ ನಡುವಿನ ಸಂಬಂಧಗಳ ಸಕ್ರಿಯವಾಗಿ ಅಭಿವೃದ್ಧಿಪಡಿಸುತ್ತಿದ್ದೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸಲು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ, ವಿಶೇಷವಾಗಿ ವಿಶ್ವಸಂಸ್ಥೆ ಮತ್ತು ಜಿ- ೨೦ ನಲ್ಲಿ ಸಂವಹನವನ್ನು ಹೆಚ್ಚಿಸುವುದರ ಜೊತೆಗೆ ಶಾಂತಿ ಸೂತ್ರ ಕಾರ್ಯಗತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದಿದ್ದಾರೆ.
ವೊಲೊಡಿಮಿರ್ ಝೆಲೆನ್ಸಿ ಮಾತನಾಡಿ ಎರಡನೇ ಶಾಂತಿ ಶೃಂಗಸಭೆಯಲ್ಲಿ ಲಭ್ಯವಿರುವ ಅವಕಾಶಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸಭೆಯ ಕುರಿತು ಮಾಹಿತಿ ನೀಡಿ ’ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮತ್ತೊಮ್ಮೆ ಅವಲೋಕನ ಮಾಡಲು ಅವಕಾಶದ ಬಗ್ಗೆ ಚರ್ಚೆ ನಡೆಸಲಾಗಿದೆ ದ್ವಿಪಕ್ಷೀಯ ಸಂಬಂಧದಲ್ಲಿನ ಬಹಳಷ್ಟು ವಿಷಯಗಳ ಸಕಾರಾತ್ಮಕ ಆವೇಗವನ್ನು ಎರಡೂ ಕಡೆಯವರು ಮೆಚ್ಚಿದರು ಮತ್ತು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಳ್ಳಲಾಗಿದೆ ಎಂದಿದ್ದಾರೆ.
ಮೂರು ತಿಂಗಳ ಅವಧಿಯಲ್ಲಿ ಉಭಯ ನಾಯಕರ ನಡುವಿನ ಮೂರನೇ ಸಭೆ ಇದಾಗಿದೆ. ಪ್ರಧಾನಿ ಮೋದಿ ಅವರು ಆಗಸ್ಟ್ ೨೩ ರಂದು ಉಕ್ರೇನ್‌ಗೆ ಭೇಟಿ ನೀಡಿದ್ದರು ಮತ್ತು ರಷ್ಯಾ ಭೇಟಿಗೆ ಪಶ್ಚಿಮದಿಂದ ಹಿನ್ನಡೆಯ ನಂತರ ಉಕ್ರೇನ್ ಸಂಘರ್ಷದಲ್ಲಿ ಶಾಂತಿ ಸಾಧಿಸುವ ಪ್ರಯತ್ನಗಳನ್ನು ಬೆಂಬಲಿಸಲು ಭಾರತದ ಸಿದ್ಧತೆಯನ್ನು ವ್ಯಕ್ತಪಡಿಸಿದ್ದರು.