ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ
ನವದೆಹಲಿ.ಮೇ ೨- ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ಹೇಳಿದೆ.
ಹಲವಾರು ಪ್ರಕರಣಗಳಲ್ಲಿ ರಾಜ್ಯದ ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಕೇಂದ್ರ ತನಿಖೆ ಮುಂದುವರೆಸುತ್ತಿದೆ ಎಂಬ ಪಶ್ಚಿಮ ಬಂಗಾಳದ ಆಕ್ಷೇಪಣೆ ಕುರಿತು ಅರ್ಜಿ ವಿಚಾರಣೆ ವೇಳೆಯಲ್ಲಿ ಕೇಂದ್ರ ಸರ್ಕಾರ ನ್ಯಾಯಾಲಕ್ಕೆ ಇಂತಹ ಸ್ಪಷ್ಟನೆ ನೀಡಿದೆ.
ಸಂವಿಧಾನದ ೧೩೧ ನೇ ವಿಧಿಯ ಅಡಿಯಲ್ಲಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂಲ ದಾವೆ ಹೂಡಿರುವ ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯವು ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆದಿದ್ದರೂ ಸಹ ಸಿಬಿಐ ಅದರ ಪ್ರಾದೇಶಿಕ ನ್ಯಾಯವ್ಯಾಪ್ತಿಯಲ್ಲಿ ಪ್ರಕರಣಗಳನ್ನು ತನಿಖೆ ಮಾಡಲು ಎಫ್‌ಐಆರ್‌ಗಳನ್ನು ದಾಖಲಿಸುತ್ತಿದೆ ಮತ್ತು ಅದರ ತನಿಖೆಯನ್ನು ಮುಂದುವರಿಸುತ್ತಿದೆ ಎಂದು ಪಶ್ವಮಬಂಗಾಳ ಸರ್ಕಾರ ಆರೋಪಿಸಿತ್ತು.
ಭಾರತೀಯ ಒಕ್ಕೂಟವು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ. ಸಿಬಿಐ ಅದನ್ನು ದಾಖಲಿಸಿದೆ, “ಸಿಬಿಐ ಭಾರತದ ಒಕ್ಕೂಟದ ನಿಯಂತ್ರಣದಲ್ಲಿಲ್ಲಎಂದು ಮೆಹ್ತಾ ತಿಳಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನವೆಂಬರ್ ೧೬, ೨೦೧೮ ರಂದು, ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದಲ್ಲಿ ತನಿಖೆ ನಡೆಸಲು ಅಥವಾ ದಾಳಿಗಳನ್ನು ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ “ಸಾಮಾನ್ಯ ಒಪ್ಪಿಗೆ”ಯನ್ನು ಹಿಂಪಡೆದಿದೆ.