ಕಲಬುರಗಿ-ಬೆಂಗಳೂರು ಸಾಪ್ತಾಹಿಕ ರೈಲು ಸಂಚಾರ ಆರಂಭ
ಕಲಬುರಗಿ:ಮಾ.09: ಕಲಬುರಗಿ-ಬೆಂಗಳೂರು (ಬೈಯ್ಯಪ್ಪನಹಳ್ಳಿ) ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲಿಗೆ ಸಂಸದ ಡಾ.ಉಮೇಶ ಜಾಧವ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲ ಚಾಲನೆ ನೀಡಿದರು.
ಕಲಬುರಗಿಯಿಂದ ಸಂಜೆ 5.10ಕ್ಕೆ ಹೊರಡುವ ಈ ರೈಲು (01111) ಮರುದಿನ ಬೆಳಗ್ಗಿನ ಜಾವ 4.15ಕ್ಕೆ ಬೈಯ್ಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. ಶಹಾಬಾದ್, ವಾಡಿ, ಯಾದಗಿರಿ, ರಾಯಚೂರು ಇತರೆಡೆ ನಿಲ್ಲಲಿದೆ. ಪ್ರಸ್ತುತ ಈ ರೈಲು ಏಪ್ರಲ್ 4 ರಿಂದ ವಾರಕ್ಕೆ ಮೂರು ದಿನ ಸಂಚರಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಭಾಗದ ಜನ ಬೆಂಗಳೂರಿಗೆ ತೆರಳಲು ಅನುಕೂಲಕರವಾಗಿದ್ದು, ಪ್ರಗತಿಗೆ ದೊಡ್ಡ ಉತ್ತೇಜನ ನೀಡಲಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಕಲಬುರಗಿಯಿಂದ ಬೆಂಗಳೂರಿಗೆ ಸಂಚರಿಸಲು ವಂದೇ ಭಾರತ್ ಸೌಲಭ್ಯವನ್ನೂ ನೀಡಿದ್ದು, ಮಾರ್ಚ 12ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಅಫಜಲಪೂರ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಮಾತನಾಡಿ, ಈ ಭಾಗದ ಬಡ ಜನರಿಗೆ ಹಾಗೂ ಜನಸಾಮಾನ್ಯರಿಗೆ ಕಲಬುರಗಿಯಿಂದ ಬೆಂಗಳೂರಿಗೆ ಹೋಗಲು ಅನುಕೂಲವಾಗುತ್ತದೆ ಎಂದು ಹೇಳಿದರು.