ಸುಪ್ರೀಂಗೆ ಮಣಿಪುರದ ಮೊದಲ ನ್ಯಾಯಾಧೀಶರು
ನವದೆಹಲಿ,ಜು.೧೨-ದೇಶದ ಸ್ವಾತಂತ್ರ್ಯದ ನಂತರ, ಸುಪ್ರೀಂ ಕೋರ್ಟ್ ತನ್ನ ಮೊದಲ ನ್ಯಾಯಾಧೀಶರನ್ನು ಮಣಿಪುರದಿಂದ ನೇಮಕಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗೆ ಎರಡು ಹೆಸರುಗಳನ್ನು ಶಿಫಾರಸು ಮಾಡಿದೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಮತ್ತು ಮದ್ರಾಸ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್ ಮಹದೇವನ್ ಅವರ ಹೆಸರುಗಳು ಸೇರಿವೆ.
ಕೊಲಿಜಿಯಂ ಶಿಫಾರಸುಗಳನ್ನು ಅಂಗೀಕರಿಸಿದರೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರು ಮಣಿಪುರದಿಂದ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಮೊದಲ ನ್ಯಾಯಾಧೀಶರಾಗಲಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ೭೦ ವರ್ಷಗಳಲ್ಲಿ ಮಣಿಪುರದಿಂದ ಸುಪ್ರೀಂ ಕೋರ್ಟ್‌ಗೆ ಯಾವುದೇ ನ್ಯಾಯಾಧೀಶರನ್ನು ನೇಮಿಸಲಾಗಿಲ್ಲ ಎನ್ನಲಾಗಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಮಂಜೂರಾದ ನ್ಯಾಯಾಧೀಶರ ಸಂಖ್ಯೆ ೩೪ ಆಗಿದೆ. ಆದರೆ, ಪ್ರಸ್ತುತ ೩೨ ನ್ಯಾಯಾಧೀಶರಿದ್ದು, ಮಂಜೂರಾದ ಸಂಖ್ಯಾಬಲಕ್ಕಿಂತ ಇಬ್ಬರು ಕಡಿಮೆ ಇದ್ದಾರೆ. ಅದೇ ಸಮಯದಲ್ಲಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ ಕೂಡ ಸೆಪ್ಟೆಂಬರ್‌ನಲ್ಲಿ ನಿವೃತ್ತರಾಗಲಿದ್ದಾರೆ, ಇದರಿಂದಾಗಿ ಹೊಸ ನೇಮಕಾತಿಗಳ ಅಗತ್ಯವು ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಇಬ್ಬರ ಹೆಸರನ್ನು ಶಿಫಾರಸು ಮಾಡಿದೆ. ಕೊಲಿಜಿಯಂನ ಇತರ ಸದಸ್ಯರಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಭೂಷಣ್ ಆರ್ ಗವಾಯಿ, ಸೂರ್ಯ ಕಾಂತ್ ಮತ್ತು ಹೃಷಿಕೇಶ್ ರಾಯ್ ಸೇರಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರು ಮಾರ್ಚ್ ೧, ೧೯೬೩ ರಂದು ಇಂಫಾನ್‌ನಲ್ಲಿ ಜಪಿಸಿದ್ದಾರೆ. ಅವರನ್ನು ಫೆಬ್ರವರಿ ೧೫, ೨೦೨೩ ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ನ್ಯಾಯಮೂರ್ತಿ ಕೋಟೀಶ್ವರ್ ಸಿಂಗ್ ಅವರು ಮಾಜಿ ಗೌಹಾಟಿ ಹೈಕೋರ್ಟ್ ನ್ಯಾಯಾಧೀಶ ಎನ್ ಇಬೊಟೊಂಬಿ ಸಿಂಗ್ ಅವರ ಪುತ್ರ. ೧೯೮೬ ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಎಲ್ ಎಲ್ ಬಿ ಮಾಡಿದ ನಂತರ, ಅವರು ಗೌಹಾಟಿ ಹೈಕೋರ್ಟ್‌ನಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದಾರೆ. ೨೦೧೧ರ ಅಕ್ಟೋಬರ್‌ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಕೊಲಿಜಿಯಂನ ಶಿಫಾರಸಿನಲ್ಲಿ ನ್ಯಾಯಮೂರ್ತಿ ಕೋಟೀಶ್ವರ್ ಸಿಂಗ್ ಅವರ ನ್ಯಾಯಾಂಗ ಸಾಮರ್ಥ್ಯ ಮತ್ತು ಆಡಳಿತಾತ್ಮಕ ಭಾಗದಲ್ಲಿ ಅವರು ಮಾಡಿದ ಕೆಲಸಗಳ ವಿಷಯದಲ್ಲಿ ದಾಖಲೆ ಇದೆ ಎನ್ನಲಾಗಿದೆ.