ಪ್ರಭಾವಿಗಳ ಕೃತ್ಯಕ್ಕೆ ಬಡವರು ಬಲಿ
ಬೆಂಗಳೂರು, ಜೂ.೨೨- ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಗ್ಗೆ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಬರೆದುಕೊಂಡಿದ್ದಾರೆ.
ರಮ್ಯಾ ಟ್ವಿಟರ್‌ನಲ್ಲಿ ಇದೀಗ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಇತ್ತೀಚಿನ ಪ್ರಕರಣಗಳಲ್ಲಿ ಕಾನೂನು ಉಲ್ಲಂಘಿಸುವವರು ಶ್ರೀಮಂತರು, ಶಕ್ತಿಶಾಲಿಗಳು ಮತ್ತು ಪ್ರಭಾವಿಗಳು ಆಗಿದ್ದಾರೆ ಅವರ ಹಿಂಸಾತ್ಮಕ ಕೃತ್ಯಗಳಿಗೆ ಬಲಿಪಶುಗಳು ಬಡವರು, ಮಹಿಳೆಯರು ಮತ್ತು ಮಕ್ಕಳು, ಸಾಮಾನ್ಯ ಜನರು ಎಂದಿದ್ದಾರೆ. ಕರ್ನಾಟಕದಲ್ಲಿ ಇಂತಹ ಕ್ರಿಮಿನಲ್ ಪ್ರಕರಣಗಳನ್ನು ಹೊರತರುತ್ತಿರುವ ಪೋಲೀಸ್ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ಅಂತಹ ಸಂದರ್ಭಗಳಲ್ಲಿ, ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮಾತ್ರ ಅದರ ತಾರ್ಕಿಕ ಹಂತಕ್ಕೆ ತೆಗೆದುಕೊಂಡು ನ್ಯಾಯವನ್ನು ನೀಡಬಹುದು. ನ್ಯಾಯವು ಮೇಲುಗೈ ಸಾಧಿಸದಿದ್ದರೆ – ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತಿದ್ದೇವೆ? ಎಂದು ಪ್ರಶ್ನಿಸಿದ್ದಾರೆ.