ವಂದೇ ಭಾರತ ರೈಲು ಸೇವೆ ವಿಜಯಪುರಕ್ಕೆ ವಿಸ್ತರಿಸಲು ಸಂಸದ ಜಿಗಜಿಣಗಿಗೆ ಪಾಟೀಲ ಮನವಿ
ವಿಜಯಪುರ,ಜೂ.23: ವಿಜಯಪುರ ಮತ್ತು ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸತತ 7ನೇ ಬಾರಿಗೆ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರಿಗೆ 24.11.2023ರಂದು ಪತ್ರ ಬರೆದು ಈ ಕುರಿತು ಮನವಿ ಮಾಡಿದ್ದೆ. ಆದರೆ, ಅವರು ಸ್ಪಂದಿಸಲಿಲ್ಲ. ಆದರೂ, ಜಿಲ್ಲೆಯ ಮತದಾರರು ತಮ್ಮನ್ನು ಪುನರಾಯ್ಕೆ ಮಾಡಿದ್ದಾರೆ. ತಮ್ಮ ಪರ ಮತ ಹಾಕಿರುವ ಮತದಾರರ ಋಣ ತೀರಿಸುವ ಸಲುವಾಗಿಯಾದರೂ ಸಂಸದರು ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು ಶ್ರಮಿಸಬೇಕು. ಈಗಾಗಲೇ ನಮ್ಮ ನೆರೆಯ ಜಿಲ್ಲೆಗಳಾದ ಕಲಬುರಗಿ, ಬೆಳಗಾವಿ, ಧಾರವಾಡ ಸೇರಿದಂತೆ ಎಲ್ಲ ಜಿಲ್ಲೆಗಳಿಂದ ಈ ರೈಲು ಸೇವೆ ಲಭ್ಯವಿದೆ. ಆದರೆ, ಅಖಂಡ ವಿಜಯಪುರ ಜಿಲ್ಲೆಯಿಂದ ಇನ್ನೂ ವಂದೇ ಭಾರತ ರೈಲು ಪ್ರಾರಂಭವಾಗಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಉಭಯ ಜಿಲ್ಲೆಗಳ ಜನರಿಂದ ಸಾಕಷ್ಟು ಬೇಡಿಕೆ ಬರುತ್ತಿದ್ದರೂ ನೀವು ಕಣ್ಮುಚ್ಚಿ ಕುಳಿತಿರುವಂತಿದೆ. ಸಂಸತ್ತಿನಲ್ಲಿ ಒಂದೂ ಪ್ರಶ್ನೆಯನ್ನು ಕೇಳದ ತಾವುಗಳು ಈ ರೈಲು ಸೇವೆ ಪ್ರಾರಂಭಿಸಲು ಕ್ರಮ ಕೈಗೊಂಡರೆ ಉಭಯ ಜಿಲ್ಲೆಗಳಲ್ಲಿ ತಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ. ಈ ರೈಲು ಸೇವೆ ಪ್ರಾರಂಭವಾದ ತಕ್ಷಣ ಸಂಸದÀ ರಮೇಶ ಜಿಗಜಿಣಗಿ ಅವರನ್ನು ವಿಜಯಪುರ ಜಿಲ್ಲೆಯ ಜನರ ಪರವಾಗಿ ನಾಗರಿಕ ಸನ್ಮಾನ ಮಾಡಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈಗ ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ ಸ್ಥಳಗಳನ್ನು ತಲುಪಲಾಗುತ್ತಿಲ್ಲ. ಬೆಂಗಳೂರಿಗೆ ಜಿಲ್ಲೆಯ ಜನರು ದಿನನಿತ್ಯದ ವ್ಯವಹಾರ ಸಂಬಂಧಿ ಮತ್ತು ಸರಕಾರಿ ಕಚೇರಿ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗಿ- ಬರುವ ಜನರಿಗೆ ತೊಂದರೆಯಾಗಿದೆ. ಅಲ್ಲದೇ, ಬೆಂಗಳೂರಿನಿಂದ ವಿಜಯಪುರಕ್ಕೆ ಬರುವ ರೈಲುಗಳ ಸಂಚಾರ ಸಮಯವೂ ಸಹ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಿಂದ ಸಾಕಷ್ಟು ಜನ ಯುವಕರು ಉದ್ಯೋಗ ಅರಸಿ ಬೆಂಗಳೂರಿನಲ್ಲಿ ನೆಲಸಿರುತ್ತಾರೆ. ಹಬ್ಬಗಳು ಮತ್ತು ಸಾಲುಸಾಲು ರಜೆಗಳು ಇರುವ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಪ್ರಯಾಣ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡುತ್ತಾರೆ. ಇದರಿಂದ ಬೆಂಗಳೂರಿನಲ್ಲಿ ಕೆಲಸ ಮಾಡುವ ಯುವಕರು, ಕಾರ್ಮಿಕರು ಮತ್ತು ಇತರೆ ಸಾರ್ವಜನಿಕರಿಗೆ ತುಂಬಾ ಹೊರೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದರ ಜೊತೆಗೆ ಮಹಾರಾಷ್ಟ್ರದ ಮುಂಬೈನಿಂದ ಸೊಲ್ಲಾಪುರ ವರೆಗೆ ಸಂಚರಿಸುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರ ವರೆಗೆ ವಿಸ್ತರಿಸಬೇಕು. ಇದರಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸೊಲ್ಲಾಪುರ, ಪುಣೆ ಮತ್ತು ಮುಂಬೈಗೆ ಸಂಚರಿಸುವ ಜಿಲ್ಲೆಯ ಜನರಿಗೆ ಅನಕೂಲವಾಗಲಿದೆ.
ಈ ರೈಲು ಸೇವೆ ಪ್ರಾರಂಭಕ್ಕೆ ಕ್ರಮ ಕೈಗೊಂಡರೆ, ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ವ್ಯಾಪಾರ ವಹಿವಾಟಿಗೂ ಸಾಕಷ್ಟು ಪೆÇ್ರೀತ್ಸಾಹ ಸಿಗಲಿದೆ. ಅಲ್ಲದೇ, ಈ ಭಾಗದಲ್ಲಿ ಆರ್ಥಿಕ ಅಭಿವೃದ್ಧಿಯೂ ಆಗಲಿದೆ. ಈಗಲಾದರೂ ತಾವು ಎಚ್ಚೆತ್ತುಕೊಂಡು ಅರಣ್ಯರೋದÀನವಾಗಿರುವ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ, ತಮಗೆ ಮತಹಾಕಿ ಮತ್ತೆ ಅಧಿಕಾರ ನೀಡಿರುವ ಮತದಾರರನ್ನು ಕೇವಲ ಮತಗಳಿಕೆಗμÉ್ಟೀ ಸೀಮಿತಗೊಳಿಸಿದಂತಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಂಸದ ರಮೇಶ ಜಿಗಜಿಣಗಿ ಅವರಲ್ಲಿ ಕಳಕಳಿಯ ಮನವಿ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಜೂ. 18 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.