ವಿದ್ಯೆ ದುಡಿಮೆ ತಾಳ್ಮೆ ಬದುಕಿನ ಶ್ರೇಯಸ್ಸಿಗೆ ಮೆಟ್ಟಿಲು :  ರಂಭಾಪುರಿ ಶ್ರೀ

ಸಂಜೆವಾಣಿ ವಾರ್ತೆ
ಬಾಳೆಹೊನ್ನೂರು.ಜೂ.೨; ಮೌಲ್ಯಾಧಾರಿತ ಬದುಕಿಗೆ ಶಿಕ್ಷಣ ಅಗತ್ಯ. ಸಂಸ್ಕಾರಯುಕ್ತ ಶಿಕ್ಷಣದಿಂದ ಜೀವನ ಉಜ್ವಲ. ವಿದ್ಯೆ ದುಡಿಮೆ ಮತ್ತು ತಾಳ್ಮೆ ಬದುಕಿನ ಯಶಸ್ಸಿಗೆ ಮೆಟ್ಟಿಲು ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ 32ನೇ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಕಣ್ಣು ಚೆನ್ನಾಗಿದ್ದರೆ ಜಗ ಚೆನ್ನಾಗಿ ಕಾಣುತ್ತದೆ. ನಾಲಿಗೆ ಚೆನ್ನಾಗಿದ್ದರೆ ಜನರಿಗೆ ಒಳ್ಳೆಯವರಾಗಿ ಕಾಣುತ್ತೇವೆ. ಕಷ್ಟ ಕಲಿಸುತ್ತದೆ. ಸುಖ ಮರೆಸುತ್ತದೆ. ಆದರೆ ಒಳ್ಳೆಯತನ ಮತ್ತು ಆತ್ಮವಿಶ್ವಾಸ ಮಾತ್ರ ಬಾನೆತ್ತರಕ್ಕೆ ಬೆಳೆಯಲು ಸಹಕರಿಸುತ್ತದೆ. ಕಷ್ಟ ಯಾವಾಗಲೂ ಸಾಗರದಷ್ಟು ಇದ್ದರೆ ಸುಖ ಸಾಸುವೆಯಷ್ಟೇ ಸಿಗುವುದು. ಮನುಷ್ಯ ಮನಸ್ಸಿನಿಂದ ದೊಡ್ಡವನಾಗಬೇಕೆ ಹೊರತು ಬಟ್ಟೆ ಮತ್ತು ಸಿರಿ ಸಂಪತ್ತಿನಿAದಲ್ಲ. ಎತ್ತರಕ್ಕೆ ಏರಬೇಕಾದರೆ ಮೆಟ್ಟಲು ತುಳಿಯಬೇಕೆ ವಿನಾ ಇನ್ನೊಬ್ಬರನ್ನು ತುಳಿಯಬಾರದು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಪ್ರಾರಂಭಗೊAಡು 32 ವರ್ಷಗಳು ಪೂರ್ಣಗೊಂಡಿವೆ. ಈ ಅವಧಿಯಲ್ಲಿ ಬಹಳಷ್ಟು ವೀರಮಾಹೇಶ್ವರ ಅರ್ಚಕರು, ಪುರೋಹಿತರು ಹಾಗೂ ಮಠಾಧೀಶರನ್ನು ನಾಡಿಗೆ ಕೊಟ್ಟ ಹೆಮ್ಮೆ ನಮಗಿದೆ. ಎಲ್ಲ ಸಾಧಕರು ಶಾಂತಿ ತಾಳ್ಮೆಯಿಂದಿದ್ದು ಆಧ್ಯಾತ್ಮ ಜ್ಞಾನ ಸಂಪತ್ತನ್ನು ಸ್ವೀಕರಿಸುವ ಸೌಭಾಗ್ಯ ಎಲ್ಲರಿಗೂ ಪ್ರಾಪ್ತವಾಗಲೆಂದರು. ಪ್ರಾಸ್ತಾವಿಕವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಕುಲಪತಿಗಳಾದ ಬೆಳಗಾಲಪೇಟೆ ಹಿರೇಮಠದ ವಿದ್ವಾನ್ ಸಿದ್ದಲಿಂಗಯ್ಯ ಮಾತನಾಡಿ ವಿದ್ಯೆ ಸಾಧಕನ ಅಮೂಲ್ಯ ಸಂಪತ್ತು. ಜೀವನ ಬದಲಿಸಿಕೊಳ್ಳಲು ಎಲ್ಲರಿಗೂ ಸಮಯ ಸಿಗುತ್ತದೆ. ಸಮಯ ಬದಲಿಸಲು ಮತೊಮ್ಮೆ ಜೀವನ ಸಿಗದು. ತಿಳಿದವರೊಂದಿಗೆ ಅರ್ಧ ಗಂಟೆ ಕಳೆದರೆ ನಾಲ್ಕು ಪುಸ್ತಕ ಓದಿದಂತೆ. ನೋಡುವ ದೃಷ್ಟಿ ಕೈಕೊಂಡ ಕಾರ್ಯ ಉತ್ತಮವಾಗಿದ್ದರೆ. ಶ್ರೇಯಸ್ಸು ಕಟ್ಟಿಟ್ಟ ಬುತ್ತಿ. ಗುರುಕುಲದ ಎಲ್ಲಾ ಸಾಧಕರು. ಶ್ರದ್ಧೆ ನಿಷ್ಠೆಯಿಂದ ಜ್ಞಾನ ಸಂಪತ್ತನ್ನು ಸಂಪಾದಿಸಿಕೊಳ್ಳಬೇಕೆAದರು. ಈ ಸಂದರ್ಭದಲ್ಲಿ ಜೂನ್ ತಿಂಗಳÀ ‘ರಂಭಾಪುರಿ ಬೆಳಗು’ ಮಾಸ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.