ಶಿಕ್ಷಣದ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಆದರ್ಶ ಸಮಾಜವನ್ನು ನಿರ್ಮಿಸಿ:ಅರುಣಕುಮಾರ ಎಮ್. ಪಾಟೀಲ
ಕಲಬುರಗಿ:ಸೆ.24:ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಇಂದು 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮಹಾವಿದ್ಯಾಲಯದ ಸಭಾಂಗಣದಲ್ಲಿಆಯೋಜಿಸಲಾಗಿತ್ತು.
ಈ ಸಮಾರಂಭಕ್ಕೆ ಉದ್ಘಾಟಕರಾಗಿ ಆಗಮಿಸಿದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಂಸ್ಥೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಶ್ರೀ ಅರುಣಕುಮಾರ ಎಮ್. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಾವಿದ್ಯಾಲಯದ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ತಮ್ಮ ಶಾಲಾ ದಿನಗಳ ಸವಿ ನೆನಪಿಸಿ ಕೊಳ್ಳುತ್ತಾ, 1965 ರಲ್ಲಿ ಸ್ಥಾಪನೆಯಾದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಕಟ್ಟಿಕೊಂಡ ಕಲ್ಯಾಣ ಕರ್ನಾಟಕ ಪ್ರದೇಶದ ಅನೇಕ ವಿದ್ಯಾರ್ಥಿನಿಯರ ಸಾಧನೆಯ ಮೆಟ್ಟಿಲಾಗಿದೆ ಎಂದು ಮಾತನಾಡಿದರು. ಮುಂದುವರೆದು ಮಾತನಾಡುತ್ತಾ ಸೋಲು ಎನ್ನುವುದು ಯಶಸ್ಸಿಗೆ ದಾರಿ. ವೈಫಲ್ಯಕ್ಕೆ ಅಂಜಬಾರದು. ಜಗತ್ತಿನಲ್ಲಿ ಸೋಲಿನಿಂದ ಯಶಸ್ಸಿನತ್ತ ತಿರುಗಿದ ಹಲವಾರು ಪ್ರಮುಖ ವ್ಯಕ್ತಿಗಳನ್ನು ನಾವೆಲ್ಲರೂ ಇಂದಿನ ಯುಗದಲ್ಲಿ ನಾವು ಕಾಣಬಹುದಾಗಿದೆ.
ಜೀವನವೆಂಬುದು ಏಳುಬೀಳಿನ ಕಥೆ, ನೋವು-ನಲಿವಿನ ಜೊತೆ, ಸೋಲು-ಗೆಲುವಿನ ಕಂತೆ. ಅನುಭವವೆಂಬ ವಿಶಾಲ ಸಾಗರದುದ್ದಕ್ಕೂ ಈಜುತ್ತಾ, ಸಿಹಿ-ಕಹಿ ನೆನಪುಗಳೊಂದಿಗೆ, ಮಾಡಿದ ತಪ್ಪು ತಿದ್ದಿಕೊಂಡು ಸರಿ ಮಾರ್ಗದಲ್ಲಿ ನಡೆಯುವುದೇ ನಿಜವಾದ ಜೀವನ. ಈ ಜೀವನ ನಾವು ಅಂದುಕೊಂಡಂತೆ ಖಂಡಿತಾ ಇರುವುದಿಲ್ಲ ! ಆದರೆ ಉತ್ತಮ ಜೀವನ ರೂಪಿಸಿಕೊಳ್ಳುವ ಮುಖ್ಯ ರೂವಾರಿ ನಾವೇ ಆಗಿರುತ್ತೇವೆ ಎಂಬುದು ಸತ್ಯ. ಹೀಗಾಗಿ ಸಂಸ್ಥೆಯ ನಮ್ಮ ಮಹಾವಿದ್ಯಾಲಯದ ಪ್ರವೇಶ ದ್ವಾರದಲ್ಲಿ “ನನ್ನ ಜೀವನದ ಶಿಲ್ಪಿ ನಾನೇ” ಎಂದು ನೆನಪಿಸಿ ಕೊಡುವ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಮನೆಯಲ್ಲಿ ತಮ್ಮ ತಂದೆ-ತಾಯಿಯವರ ಜೊತೆಗೆ ಮನೆಕೆಲಸದಲ್ಲಿ ನೆರವಾಗುತ್ತಾ ಗುರು ಹಿರಿಯರು ಕಲಿಸಿಕೊಡುವ ಪಾಠ ಪ್ರವಚನಗಳನ್ನು ಆಸಕ್ತಿಯಿಂದ ಆಲಿಸಿ, ಜೀವನದಲ್ಲಿ ನಾವು ಅನುಭವಿಸುವ ಸುಖ-ದುಃಖಗಳು ನಮ್ಮಯ ಪಾಲಿನ ಸುಂದರ ಅನುಭವಗಳು. ಈ ಲೋಕದಲ್ಲಿ ಹುಟ್ಟಿ ಇಲ್ಲೇ ಬೆಳೆದ ನಾವು ಏನಾದರೂ ಸಾಧಿಸಬೇಕು. ನಾನು ಹುಟ್ಟಿದ ಈ ನೆಲಕ್ಕೆ ಏನಾದರೂ ಕೊಡುಗೆ ನೀಡಬೇಕು. ನಮ್ಮ ಜೀವನ ಎಲ್ಲರಿಗೂ ಆದರ್ಶವಾಗಬೇಕು ಎಂದು ಮಾತನಾಡುತ್ತಾ ವಿದ್ಯಾರ್ಥಿನಿಯರು ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸರಕಾರದಿಂದ ಹೆಣ್ಣು ಮಕ್ಕಳಿಗಾಗಿ ಇರುವಂತಹ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಇರುವಂತಹ ಮೀಸಲಾತಿಯನ್ನು ತಮ್ಮ ಮುಂಬರುವ ದಿನಗಳಲ್ಲಿ ಪಡೆದುಕೊಳ್ಳಬೇಕು ಎಂದು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿ, ತ್ರೈಮಾಸಿಕ ಕಿರು ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪೆÇ್ರೀತ್ಸಾಹ ಧನವನ್ನು ನೀಡಲಾಯಿತು.
ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಂಸ್ಥೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಅಭಿವೃದ್ಧಿ ಮಂಡಳಿಯ ಸಂಚಾಲಕರಾದ ಶ್ರೀ ನಾಗಣ್ಣ ಘಂಟಿ ಅವರು ವಹಿಸಿಕೊಂಡು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಭಾಗವಹಿಸಿ ವಿದ್ಯಾರ್ಥಿನಿಯರೆಲ್ಲಗೂ ತಮ್ಮ ಸುಂದರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುಲು ಸಾಂಸ್ಕ್ರತಿಕ, ಸಾಹಿತ್ಯಿಕ, ವಿಜ್ಞಾನ, ವಾಣಿಜ್ಯ, ಕ್ರೀಡೆಗೆ ಸಂಬಂಧಿಸಿದ ವಿವಿಧ ಚಟುವಟುಕೆಗಳಲ್ಲಿ ಭಾಗವಹಿಸಿ ಶಿಸ್ತು, ಸಂಸ್ಕಾರದೊಂದಿಗೆ ಪರಿಣಾಮಕಾರಿಯಾದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕಲಿಯುಗದ ಕಡೆ ಶರಣ ಶ್ರೀ ಕೂಡಲೂರು ಬಸವಲಿಂಗೇಶ್ವರ ಶರಣರ ಹೆಸರಿನಲ್ಲಿ ನಮ್ಮ ಮಹಾವಿದ್ಯಾಲಯದಿಂದ ರಾಜ್ಯಕ್ಕೆ ರ್ಯಾಂಕ್ ಪಡೆದು ಕೊಳ್ಳುವ ವಿದ್ಯಾರ್ಥಿನಿಯರಿಗೆ ರೂ.25000/- ನಗದು ಬಹುಮಾನವನ್ನು ನೀಡುತ್ತೇನೆ ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಸಲಹೆಗಾರರಾಗಿ ಉಪನ್ಯಾಸಕರಾದÀ ಶ್ರೀಮತಿ ಶೈಲಜಾ ನಾಕೇದಾರ ಅವರು ಡಾ. ಕಾಶೀಬಾಯಿ ಬೋಗಶೆಟ್ಟಿ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು.
ಶ್ರೀಮತಿ ರಷ್ಮೀ ಸ್ವಾಮಿ ಅವರು ಸಿಬ್ಬಂದಿ ಕಾರ್ಯದರ್ಶಿಗಳಾಗಿ ಆಯ್ಕೆಗೊಂಡು ಶ್ರೀಮತಿ ಕನ್ಯಾಕುಮಾರಿ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು.
ಡಾ. ನಯನತಾರ ಆಸ್ಪಲ್ಲಿ ಅವರು ವಿದ್ಯಾರ್ಥಿ ಸಂಘದ ಚುನಾವಣೆಯ ವರದಿಯನ್ನು ನೀಡಿದರು. ಶ್ರೀಮತಿ ಜ್ಯೋತಿ ಪಾಟೀಲ, ಶ್ರೀಮತಿ ಅನಿತಾ ಪಾಟೀಲ, ಶ್ರೀಮತಿ. ಮಾನಸಾ, ಶ್ರೀಮತಿ ಸಂತೋಷಿ ಕೆ, ಶ್ರೀಮತಿ ಪ್ರೀಯಾ ನಿಗ್ಗುಡಗಿ, ಶ್ರೀ. ಬಸವರಾಜ ಗೋಣಿ, ಶ್ರೀ ಗುಲಿಂಗಯ್ಯಾ ಸ್ವಾಮಿ, ಶ್ರೀ ಕಿರಣಕುಮಾರ, ಬೋಧಕೇತರ ಸಿಬ್ಬಂದಿಗಳಾದ ಶ್ರೀಮತಿ ಜ್ಯೋತಿ ಕಲ್ಲೂರ, ಶ್ರೀಮತಿ. ಸುಚಿತಾ ಪಾಟೀಲ, ಶ್ರೀಮತಿ. ಶರಣಮ್ಮ ನೆಲ್ಲೂರ, ಶ್ರೀಮತಿ ಭಾಗ್ಯವತಿ, ಶ್ರೀಮತಿ ಜಯಶ್ರೀ ಎನ್ ಮತ್ತಿತರು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಉಪನ್ಯಾಸಕರಾದ ಶ್ರೀಮತಿ ಪ್ರೀಯಾ ನಿಗ್ಗುಡಗಿ ಅವರು ಅತಿಥಿಗಳನ್ನು ಪರಿಚಯಿಸಿದರು ಮತ್ತು ಶ್ರೀಮತಿ ಮಹಾನಂದಾ ಗೊಬ್ಬುರ ಅವರು ವಂದಿಸಿದರು. ಉಪನ್ಯಾಸಕರಾದ ಶ್ರೀಮತಿ ಜಗದೇವಿ ಚಿಕ್ಕೆಗೌಡ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ನಿರುಪಿಸಿದರು