ವಿಶ್ವ ತಂಬಾಕು ರಹಿತ ದಿನಾಚರಣೆ: ಜಾಗೃತಿ ಜಾಥಾ
ಗದಗ,ಜೂ1: ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ “ ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು” ಎಂಬ ಘೋಷಣೆಯೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ, ಜಿಲ್ಲಾ ವಾರ್ತಾ ಮತ್ತುss ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಆಯುಷ್ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯ, ಸ್ಪೂರ್ತಿ ಪ್ಯಾರಾಮೆಡಿಕಲ್ ಕಾಲೇಜು ಹಾಗೂ ಜಿಮ್ಸ್ ಪ್ಯಾರಾ ಮೆಡಿಕಲ್ ಕಾಲೇಜು ಗದಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮುನ್ಸಿಪಲ್ ಕಾಲೇಜ ಆವರಣದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಗರದ ಮುನ್ಸಿಪಲ್ ಕಾಲೇಜ ಆವರಣದಿಂದ ಆರಂಭಗೂಂಡು ಗಾಂಧೀ ಸರ್ಕಲ್, ಮಹೇಂದ್ರಕರ ಸರ್ಕಲ್, ಹಳೇ ಬಸ್ ನಿಲ್ದಾಣ, ರೋಟರಿ ಸರ್ಕಲ್ ಮೂಲಕ ಹಳೇ ಜಿಲ್ಲಾ ಆಸ್ಪತ್ರೆÀವರೆಗೆ ಜಾಥಾ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ ಇವರು ಚಾಲನೆ ನೀಡಿ ಮಾತನಾಡುತ್ತಾ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನದ ಮೂಲಕ “ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳ ರಕ್ಷಣೆ” ಮಾಡಲು ಸಾದ್ಯವಿದೆ ಎಂದು ತಿಳಿಸಿದರು. ತದನಂತರ ಡಾ.ವೆಂಕಟೇಶ ರಾಥೋಡ್ ಕಾರ್ಯಕ್ರಮಧಿಕಾರಿಗಳು ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಗದಗ ಇವರು ಮಾತನಾಡುತ್ತÀ ತಂಬಾಕು ವ್ಯಸನದಿಂದ ಆರೋಗ್ಯ ಮೇಲೆ ಬಹಳಷ್ಟು ದುಷ್ಟರಿಣಾಮಗಳ ಉಂಟಾಗುತ್ತವೆ. ಉದಾಹರಣೆಗೆ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾಶ್ರ್ವವಾಯು ಹಾಗೂ ತಂಬಾಕಿನಲ್ಲಿನ ನಿಕೋಟಿನ್ ಅಂಶ ರಕ್ತನಾಳಗಳಲ್ಲಿ ಸೇರಿ ದೇಹದ ಪ್ರತಿಯೊಂದು ಅಂಗದ ಮೇಲೆ ಪರಿಣಾಮ ಬಿರುತ್ತದೆ, ಈ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ಕೋಟ್ಪಾ ದಾಳಿ, ವ್ಯಸನಿಗಳಿಗೆ ಆಪ್ತ ಸಮಾಲೋಚನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ ಗದಗ ಇವರು ಮಾತನಾಡುತ್ತ ತಂಬಾಕು ಕುರಿತಾದ ನೇರ ಪರೋಕ್ಷ ಜಾಹಿರಾತುಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವದು, ತಂಬಾಕು ಕಂಪನಿಗಳಿಂದ ಉಚಿತ ಉಡುಗೋರೆ ನೀಡುವ ಮೂಲಕ ಮಕ್ಕಳು ತಂಬಾಕು ವ್ಯಸನಕ್ಕೆ ಬಲಿಯಾಗುವದನ್ನು ತಪ್ಪಿಸಲು ಕ್ರಮ ವಹಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿ.ಪಂ. ಯೋಜನಾ ನಿರ್ದೇಶಕ ಜಗದೇವಪ್ಪ ಬಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ತಾಲೂಕು ಆರೋಗ್ಯಾದಿಕಾರಿ ಡಾ ಪ್ರೀತ ಖೋನಾ, ಉಪ ಪೆÇಲೀಸ್ ವರಿಷ್ಠಾಧಿಕಾರಿಗಳು ಸಂಕದ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಮ್.ವೈ ಹೀರೆಮನಿ ಪಾಟೀಲ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾನ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಉಪ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ, ಜಿಮ್ಸ್ ಪ್ಯಾರಾಮೆಡಿಕಲ್‍ಕಾಲೇಜಿನ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗಹಿಸಿದ್ದರು.
ಎಸ್.ಎಸ್.ಪೀರಾ ಪ್ರ.ದ.ಸ. ಕಾರ್ಯಕ್ರಮ ನಿರೂಪಿಸಿದರು.