ಮಹಾತ್ಮ ಬಸವೇಶ್ವರರ ಜಾತ್ರಾ ಮಹೋತ್ಸವ, ಅದ್ದೂರಿ ರಥೋತ್ಸವ
ಬಸವಕಲ್ಯಾಣ:ಮೇ.14: ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ, ವಿಶ್ವಸ್ಥ ಸಮಿತಿಯಿಂದ ಬಸವ ಜಯಂತಿ ಅಂಗವಾಗಿ ಮೂರು ದಿನಗಳ ಕಾಲ ನಗರದಲ್ಲಿ ನಡೆದ ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸದ ನಿಮಿತ್ತ ಸೋಮವಾರ ಬೆಳಗ್ಗೆ ಭಕ್ತರ ಜೈಘೋಷಗಳ ಮಧ್ಯೆ ಅದ್ದೂರಿಯ ರಥೋತ್ಸವ ಜರುಗಿತು.
ಭಾನುವಾರ ರಾತ್ರಿ ಸಾಂಸ್ಕøತಿಕ ವೈಭವದೊಂದಿಗೆ ಆರಂಭವಾದ ಪಲ್ಲಕ್ಕಿ ನಂದಿ ಧ್ವಜಗಳ ಮೆರವಣಿಗೆ ಸೋಮವಾರ ಬೆಳಗ್ಗೆ ರಥ ಮೈದಾನಕ್ಕೆ ಬಂದಾಗ ಮೈದಾನದಲ್ಲಿ ಎಲ್ಲೆಡೆ ಜನ ಸಾಗರದಂತೆ ಕಂಡು ಬಂದರು. ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಜೈಘೋಷಗಳು ಮೋಳಗಿದವು. ಇದೇ ವೇಳೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಕೃಷಿಕರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನಡೆದ ಪಶು ಪ್ರದರ್ಶನದಲ್ಲಿ ಭಾಗವಹಿಸಿದ ಅತ್ಯುತ್ತಮ ತಳಿಗಳನ್ನು ಆಯ್ಕೆ ಮಾಡಿ ಇವುಗಳ ಮಾಲಿಕರಿಗೆ (ರೈತರಿಗೆ) ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ಬಿಡಿಪಿಸಿ ಅಧ್ಯಕ್ಷ ಬಸವರಾಜ ಕೋರಕೆ ಅಧ್ಯಕ್ಷತೆ ವಹಿಸಿದ್ದರರು. ಬಿಡಿವಿಸಿ ಅಧ್ಯಕ್ಷ ಶಶಿಕಾಂತ ದುರ್ಗೆ, ಉಪಾಧ್ಯಕ್ಷ ಡಾ. ಜಿ.ಎಸ್ ಭುರಳೆ, ಕೋಶಾಧ್ಯಕ್ಷ ಶಿವರಾಜ ಶಾಶೆಟ್ಟೆ, ವಿಶ್ವಸ್ಥರಾದ ಗದಗೆಪ್ಪಾ ಹಲಶೆಟ್ಟೆ, ಸೋಮಶೇಖರಯ್ಯ ವಸ್ತ್ರದ, ಮಲ್ಲಿನಾಥ ಮಂಠಾಳೆ, ಬಿಡಿಪಿಸಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಚಿರಡೆ, ಕೋಶಾಧ್ಯಕ್ಷ ರಾಜಕುಮಾರ ಹೊಳಕುಂದೆ, ಕಾರ್ಯದರ್ಶಿ ಶ್ರೀಕಾಂತ ಬಡದಾಳೆ, ಸಹ ಕಾರ್ಯದರ್ಶಿ ವಿವೇಕಾನಂದ ಹೊದಲೂರೆ, ನಿರ್ದೇಶಕರಾದ ವೀರಣ್ಣ ಹಲಶೆಟ್ಟೆ, ಸುಭಾಷ ಹೊಳಕುಂದೆ, ಮಲ್ಲಯ್ಯ ಹಿರೇಮಠ, ಅಶೋಕ ನಾಗರಾಳೆ, ಕಾಶೆಪ್ಪಾ ಸಕ್ಕರಭಾವಿ, ಜಗನ್ನಾಥ ಖೂಬಾ, ಭದ್ರಿನಾಥ ಪಾಟೀಲ, ಅನೀಲಕುಮಾರ ರಗಟೆ, ರೇವಣಪ್ಪ ರಾಯವಾಡೆ, ಶಿವಶರಣ ನೂಲಿ ಚಂದಯ್ಯ ಸಮಾಜದ ಅಧ್ಯಕ್ಷ ಧರ್ಮಣ್ಣ ಭೆಂಡೆ ಹಾಗೂ ಮುಖಂಡರು, ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು, ಗಣ್ಯರು, ಅಪಾರ ಸಂಖ್ಯೆಯಲ್ಲಿ ಬಸವ ಭಕ್ತರು ಭಾಗವಹಿಸಿದ್ದರು. ಡಾ.ಭೀಮಾಶಂಕರ ಬಿರಾದಾರ, ಡಾ. ರುದ್ರಮಣಿ ಮಠಪತಿ ಹಾಗೂ ಬಸವರಾಜ ಖಂಡಾಳೆ ನಿರೂಪಿಸಿದರು.
ರಥೋತ್ಸವದ ಸಂದರ್ಭದಲ್ಲಿ ಆಕರ್ಷಕ ಮದ್ದು ಸುಡುವ ಕಾರ್ಯಕ್ರಮ ಜರುಗಿತು. ಮುಜಾಂಗೃತಾ ಕ್ರಮವಾಗಿ ರಥ ಮೈದಾನ ಮತ್ತು ಮೆರವಣಿಗೆ ನಡೆದ ರಸ್ತೆಯುದ್ದಕ್ಕೂ ಪೊಲೀಸ್ ಬÀಂದೋಬಸ್ತ ಕಲ್ಪಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಪಿಐ ಅಲಿಸಾಬ, ಪಿಎಸ್‍ಐ ಅಂಬ್ರೀಷ್ ವಾಗ್ಮೋಡೆ, ಸಂಚಾರಿ ಠಾಣೆ ಪಿಎಸ್‍ಐ ಸುವರ್ಣಾ ಮಾಲಶೆಟ್ಟಿ, ಕ್ರ್ಯಂ ಪಿಎಸ್‍ಐ ಸಿದ್ರಾಮ ಹಾಗೂ ಹುಲಸುರು ಕ್ರೈಂ ಪಿಎಸ್‍ಐ ಕೃಷ್ಣಕುಮಾರ ಸುಬೇದಾರ ಅವರನ್ನು ಸನ್ಮಾನಿಸಲಾಯಿತು.
ಭಾನುವಾರ ರಾತ್ರಿ ಕೋಟೆಯಿಂದ ಮುಖ್ಯ ರಸ್ತೆ ಮಾರ್ಗವಾಗಿ ರಥ ಮೈದಾನದ ವರೆಗೆ ಆಕರ್ಷಕ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿದ್ದ ಹೆಡೆಯಿರುವ ನಂದಿ ಧ್ವಜ ಸೇರಿ ಐದು ನಂದಿ ಧ್ವಜಗಳÀ ಹಾಗೂ ಪಲ್ಲಕಿ ಮೆರವಣಿಗೆ ಸಾಂಸ್ಕøತಿಕ ವೈಭವದೊಂದಿಗೆ ಜರುಗಿತು. ವಿಶೇಷ ಸಮವಸ್ತ್ರ ಧರಿಸಿದ ಬಸವ ಭಕ್ತರು ನಂದಿ ಧ್ವಜಗಳನ್ನು ಹಿಡಿದು ಹೆಜ್ಜೆ ಹಾಕಿದರು.
ಮೆರವಣಿಗೆಯಲ್ಲಿ ಮುಂಭಾಗದಲ್ಲಿ ವಿದ್ಯುತ್ ದೀಪಗಳಿಂದ ಅಲಂಕೃತ ವಾಹನದಲ್ಲಿ ಶಿವಶರಣ ನೂಲಿ ಚಂದಯ್ಯನವರ ಮೂರ್ತಿ ಹಾಗೂ ಪಲ್ಲಕಿ ಇತ್ತು. ಕೋಟೆಯ ಬಳಿ ನಂದಿ ಧ್ವಜಗಳಿಗೆ ಹಾಗೂ ಶಿವಶರಣ ನೂಲಿ ಚಂದಯ್ಯನವರ ಪಲ್ಲಕಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೋಟೆ ಬಳಿ ನಂದಿಧ್ವಜ ಪೂಜೆಯನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬವಣ್ಣ ಲಂಗೋಟೆ ನೆರವೇರಿಸಿದರು. ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಪದಾಧಿಕಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ದಾರಿಯುದಕ್ಕೂ ಮನೆಗಳ ಮುಂದೆ-ಅಂಗಡಿಗಳ ಮುಂದೆ ನಿಂತ ಮಹಿಳೆಯರು ಪಲ್ಲಕಿಗೆ ಆರತಿ ಬೆಳಗಿ ಭಕ್ತಿ ಶ್ರದ್ಧೆಯಿಂದ ಪೂಜೆ ಸಲ್ಲಿಸತ್ತಿದ್ದರು. ಎರಡು ದಿನ ರಾತ್ರಿ ನಡೆದ ಮೆರವಣಿಗೆಯಲ್ಲಿ ಬಸವೇಶ್ವರ ದೇವಸ್ಥಾನಪಂಚ ಕಮಿಟಿ, ವಿಶ್ವಸ್ಥ ಸಮಿತಿ ಪದಾಧಿಕಾರಿಗಳು, ಶಿವಶರಣ ನೂಲಿಚಂದಯ್ಯ ಹಾಗೂ ಮಾದಾರ ಚನ್ನಯ್ಯ ದೇವಸ್ಥಾನ ಪಂಚ ಕಮಿಟಿ ಪದಾಧಿಕಾರಿ-ಪ್ರಮುಖರು ಭಾಗವಹಿಸಿದರು.