ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ
ಗದಗ, ಮೇ 5: ನರಗುಂದ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕಡ್ಡಾಯ ಮತದಾನ ಜಾಗೃತಿ ಕುರಿತು ಕ್ಯಾಂಡಲ್ ಲೈಟ್ ಮತ್ತು ಮೊಬೈಲ್ ಟಾರ್ಚ್ ಬೆಳಗುವುದರ ಮೂಲಕ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ನಗರದ ಕೊಟ್ನೂರು ಬಸವೇಶ್ವರ ದೇವಸ್ಥಾನದಿಂದ ಜಾಥಾ ಆರಂಭವಾಗಿ ಬಸ್ ನಿಲ್ದಾಣದ ಬಳಿಕ ಸರ್ಕಾರಿ ಶಾಲೆಯ ಮೈದಾನದಲ್ಲಿ ಸೇರುವುದರ ಮೂಲಕ ಕ್ಯಾಂಡಲ್ ಲೈಟ್ ಬೆಳಗಲಾಯಿತು.