ಶ್ರೀರಾಮ ಮಂದಿರದಲ್ಲಿ ಆಂಜನೇಯ ಉತ್ಸವ ಮತ್ತು ಓಕಳಿ ವಿಜೃಂಭಣೆಯ ಕಾರ್ಯಕ್ರಮ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.28- ನಗರದ ಶಂಕರಪುರ ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ ಪಟ್ಟಾಭಿμÉೀಕದ ಅಂಗವಾಗಿ ವಿಜೃಂಭಣೆಯಿಂದ ಆಂಜನೇಯ ಉತ್ಸವ ಮತ್ತು ಓಕಳಿ ಕಾರ್ಯಕ್ರಮ ಜರುಗಿತು.
ಶ್ರೀ ರಾಮ ಮಂದಿರದ ಮುಂಭಾಗ ಹಾಗೂ ಶಂಕರಪುರ ಬಡಾವಣೆಯ ರಸ್ತೆಯಲ್ಲಿ ಮನೆಮನೆಯ ಮುಂಭಾಗ ಶುದ್ಧ ಬಣ್ಣದ ನೀರನ್ನು ಪರಸ್ಪರ ಎರಚುವ ಮೂಲಕ ಶ್ರೀ ಆಂಜನೇಯ ಓಕಳಿ ಕಾರ್ಯಕ್ರಮ ವೈಭವದಿಂದ ಜರಗಿತು.
ಅರಿಶಿನ,ಕುಂಕುಮ, ಶ್ರೀಗಂಧ ಪನ್ನೀರು,ತುಳಸಿ, ದಾಸಿವಾಳ, ಬೇವಿನ ಎಲೆ,ಮಾವಿನ ಎಲೆ, ಪಾರಿಜಾತ ಎಲೆ, ಸೀಬೆ ಎಲೆ,ಮಲ್ಲಿಗೆ ಎಲೆ ಮುಂತಾದ ಪರಿಸರಯುಕ್ತ ಎಲೆಗಳ ರಸ ಹಾಗೂ ಶುದ್ಧ ಬಣ್ಣದ ಓಕಳಿ ನೀರನ್ನು ತಯಾರಿಸಿ ಪ್ರತಿ ಮನೆಗಳಲ್ಲೂ ವಯೋಮಾನ ಭೇದವಿಲ್ಲದೆ ಪರಸ್ಪರಎರಚಿ ಸಂಭ್ರಮದಿಂದ ಓಕಳಿಯ ಕಾರ್ಯಕ್ರಮ ನೋಡುಗರಿಗೆ ಹಾಗೂ ಭಾಗವಹಿಸಿದವರಿಗೆ ಪರಮಾನಂದವನ್ನು ಉಂಟುಮಾಡಿತು.
ಓಕಳಿ ಕಾರ್ಯಕ್ರಮದ ಕುರಿತು ಮಾತನಾಡಿದ ಸಂಸ್ಕøತಿ ಚಿಂತಕ ಸುರೇಶ ಎನ್‍ಋಗ್ವೇದಿ ಮಾತನಾಡಿ ಶಂಕರ ಪುರ ಶ್ರೀರಾಮ ಮಂದಿರದಲ್ಲಿ ಏಳು ದಶಕಗಳಿಂದಲೂ ನಿರಂತರವಾಗಿ ಶ್ರೀ ರಾಮನ ಉತ್ಸವ ನಡೆಯುತ್ತಿದ್ದು 10 ದಿನಗಳ ಕಾಲ ನಡೆಯುವ ಶ್ರೀರಾಮ ಉತ್ಸವ ಅಂಗವಾಗಿ ಕೊನೆಯ ದಿನ ಆಂಜನೇಯ ಉತ್ಸವ ಪ್ರತಿ ಮನೆಮನೆಗಳಲ್ಲೂ ಆಂಜನೇಯನ ಮೆರವಣಿಗೆ ಹೋಗಿ ಪ್ರತಿ ಮನೆಯಲ್ಲಿ ವಿಶೇಷ ಪೂಜೆ ನೆರವೇರಿಸಿ ಕಾಣಿಕೆಗಳನ್ನು ಸ್ವೀಕರಿಸಿ ಶ್ರೀರಾಮ ಮಂದಿರಕ್ಕೆ ತೆರಳಿದ ನಂತರ ವಿಶೇಷವಾಗಿ ಓಕುಳಿ ಕಾರ್ಯಕ್ರಮ ನಡೆಯುತ್ತದೆ. ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಯುವ ಪೀಳಿಗೆ ಪರಸ್ಪರ ಭಾವೈಕ್ಯತೆ ಏಕತೆ, ಪ್ರೀತಿ, ವಿಶ್ವಾಸ, ನಂಬಿಕೆ ಆಧ್ಯಾತ್ಮಿಕ ಭಾವನೆ ಹಾಗೂ ಭಗವಂತನಲ್ಲಿ ದೃಢವಾದ ವಿಶ್ವಾಸ ಹಾಗೂ ಬಡವ ಶ್ರೀಮಂತ ಎಂಬ ಭಾವವಿಲ್ಲದೆ ನಾನು ಎಂಬ ಅಹಂಕಾರ ವಿಲ್ಲದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಪಾಲ್ಗೊಳ್ಳುವ ಓಕಳಿಯ ಕಾರ್ಯಕ್ರಮ ನಿಜಕ್ಕೂ ಪರಿಶುದ್ಧವಾದ ಒಂದು ಸಂಪ್ರದಾಯವಾಗಿದೆ ಎಂದರು.
ಶಂಕರಪುರ ಅಗ್ರಹಾರದ ಸುತ್ತ ನಡೆಯುವ ಈ ಕಾರ್ಯಕ್ರಮದಲ್ಲಿ ದೇಶವಿದೇಶಗಳಿಂದಲೂ ಹಾಗೂ ವಿವಿಧ ಭಾಗಗಳಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ವಿಶೇಷವಾಗಿ ಮಕ್ಕಳಿಗೆ ಹಾಗೂ ಯುವಕರಿಗೆ ವಿಶೇಷವಾದ ಆಧ್ಯಾತ್ಮಿಕ ಕಾರ್ಯಕ್ರಮವಾದ ಓಕಳಿ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.
ಶ್ರೀರಾಮ ಮಂದಿರದ ಪ್ರತಾಪ್, ಸತೀಶ್, ಕೇಶವಮೂರ್ತಿ, ರಾಜಗೋಪಾಲ್, ವತ್ಸಲ ರಾಜಗೋಪಾಲ್, ರಂಗನಾಥ್ ವಿಜಯಲಕ್ಷ್ಮಿ, ಸರಸ್ವತಿ, ರಾಧಾಕೃಷ್ಣ ಸುದರ್ಶನ್, ಮುರುಗೇಶ್, ನವೀನ ಉಮೇಶ್, ರವಿ, ಶ್ರೇಯಸ್ ರಘುನಾಥ್, ಕಾರ್ತಿಕ್, ರಮೇಶ್ ಶ್ರೀಮತಿ,ಶರಣ್ಯ, ಶ್ರಾವ್ಯಋಗ್ವೇದಿ, ಸಾನಿಕ, ಸುಮನ್, ವರ್ಷಿಣಿ, ಶ್ರೇಯಸ್, ಮಾಲಾ, ವಾಣ ,ಪದ್ಮಿನಿ, ಮೇಘನಾ, ಮಕ್ಕಳು ಹಾಗೂ ಯುವಕ ಮಿತ್ರರು ಇದ್ದರು.