ಏ. 21ಕ್ಕೆ ಸರ್ವಜ್ಞ ಸ್ಕಾಲರ್‍ಶಿಪ್ ಅಡ್ಮಿಶನ್ ಟೆಸ್ಟ್
ಕಲಬುರಗಿ:ಏ.18: ಕಲ್ಯಾಣ ಕರ್ನಾಟಕದಲ್ಲಿಯೇ ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ನೀಡುತ್ತಾ ಫಲಿತಾಂಶದಲ್ಲಿ ಪ್ರಗತಿಯ ಕಡೆಗೆ ಸಾಗುತ್ತಿರುವ, ಈ ವರ್ಷ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಹಾಗೂ ಕಲ್ಯಾಣ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಅಂಕ ಪಡೆದು ಪ್ರಥಮ ರ್ಯಾಂಕ್ ಪಡೆದ ಸರ್ವಜ್ಞ ಶಿಕ್ಷಣ ಸಂಸ್ಥೆಯ ಜಸ್ಟಿಸ್ ಶಿವರಾಜ ಪಾಟೀಲ ಕಾಲೇಜು ಶಿಕ್ಷಣ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದು, ಇದೀಗ ಸರ್ವಜ್ಞ ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಸರ್ವಜ್ಞ ಸ್ಕಾಲರ್‍ಶಿಪ್ ಅಡ್ಮಿಶನ್ ಟೆಸ್ಟ್ ನಡೆಯಲಿದೆ ಎಂದು ಪ್ರೊ. ಚನ್ನಾರಡ್ಡಿ ಪಾಟೀಲ ತಿಳಿಸಿದ್ದಾರೆ.