ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ವಿಧಾನ
ಉಜಿರೆ: ನಾರಾವಿ ಗ್ರಾಮದಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಹದಿಮೂರನೆ ವರ್ಷದ ಅನಂತನೋಂಪಿ ಆರಾಧನಾ ವಿಧಾನದ ಪ್ರಥಮ ದಿನದ ಪೂಜೆಯು ಸೋಮವಾರ ನಡೆಯಿತು.
೧೨ ಮಂದಿ ಶ್ರಾವಕರು ಹಾಗೂ ೮ ಮಂದಿ ಶ್ರಾವಕಿಯರು ಸೇರಿದಂತೆ ಒಟ್ಟು ೨೦ ಮಂದಿ ನೋಂಪಿಯ ವೃತಧಾರಿಗಳಾಗಿ ಶ್ರದ್ಧಾ-ಭಕ್ತಿಯಿಂದ ಭಾಗವಹಿಸಿದರು.
ಅಳದಂಗಡಿಯ ಪದ್ಮಪ್ರಭಇಂದ್ರ ಮತ್ತು ನಾರಾವಿ ಹರ್ಷೇಂದ್ರಇಂದ್ರ ಅವರ ಸಹಕಾರದೊಂದಿಗೆ ನೋಂಪಿ ಆರಾಧನಾ ವಿಧಾನ ನಡೆಯಿತು.
ಮೂರು ದಿನಗಳಲ್ಲಿ ಅನಂತ ನೋಂಪಿ ನಡೆಯಲಿದ್ದು ಇಂದು ಬುಧವಾರ ಸಮಾಪನಗೊಳ್ಳುತ್ತದೆ.
ಬುಧವಾರ ಮಧ್ಯಾಹ್ನ ೧೨ ಗಂಟೆಗೆ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತಿರಿದ್ದು ಮಂಗಲಪ್ರವಚನ ನೀಡುವರು.