ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವ
ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ ವೀರೇಂದ್ರ ಹೆಗ್ಗಡೆಯವರ, . ಹೇಮಾವತಿ ವಿ. ಹೆಗ್ಗಡೆಯವರ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ದಿನಾಂಕ ೮/ ೯/ ೨೦೨೪ ರಿಂದ ೧೭/೯/೨೦೨೪ ರವರೆಗೆ ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಹಾಗೆಯೇ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮತ್ತು ಸ್ವಾಧ್ಯಾಯವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.