ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ದೃಷ್ಟಿ ದೋಷ: ಡಾ. ರೇಖಾ
ಸಂಜೆವಾಣಿ ವಾರ್ತೆ,
ವಿಜಯಪುರ,ಮಾ.14: ಜಗತ್ತಿನ ಶೇ.80 ರಷ್ಟು ಜನರು ದೃಷ್ಟಿದೋಷದಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ನರಗಳ ದೌರ್ಬಲ್ಯ ಕುರುಡುತನಕ್ಕೆ ಕಾರಣವಾಗಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ್ ಆಸ್ಪತ್ರೆ ನೇತ್ರ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಮುಧೋಳ ಹೇಳಿದ್ದಾರೆ.
ಬಿ.ಎಲ್.ಡಿ.ಇ ಡಿಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ್ ವೈದ್ಯಕಿಯ ಕಾಲೆಜು, ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಗ್ಲೊಕೋಮಾ ಕಾಯಿಲೆ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಭಾರತದಲ್ಲಿ 4.50 ಮಿಲಿಯನ್ ಮತ್ತು ಜಗತ್ತಿನಲ್ಲಿ 80 ಮಿಲಿಯನ್ ಜನರು ಗ್ಲೊಕೋಮಾ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯನ್ನು ನಿರ್ಲಕ್ಷಿಸದೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಕಣ್ಣಿನ ಪೆÇರೆ ನಂತರ ನರಗಳ ದೌರ್ಬಲ್ಯದಿಂದ ಕುರುಡರಾಗಬಹುದು. ಗ್ಲೊಕೋಮಾ ಕಾಯಿಲೆ ಹೊಂದಿರುವ ರೋಗಿಗಳಲ್ಲಿ ತಲೆನೋವು, ದೃಷ್ಟಿ ಕ್ಷೀಣಿಸುವುದು ಹಾಗೂ ಕೆಲವರಲ್ಲಿ ಲಕ್ಷಣಗಳು ಕಂಡು ಬರದಿರಬಹುದು. ಈ ಕಾಯಿಲೆಯು 40ವಷಕ್ಕಿಂತ ಮೇಲ್ಪಟ್ಟ ಜನರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಧಿಕ ರಕ್ತದೊತ್ತಡ, ಮಧುಮೇಹ ರೊಗಿಗಳಲ್ಲಿ ಹಾಗೂ ದಪ್ಪ ಕನ್ನಡಕವನ್ನು ಬಳಸುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ ಎಂದು ಅವರು ಹೇಳಿದರು.
ಕಣ್ಣಿನ ಸಮಸ್ಯೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ನೇತ್ರ ವಿಭಾಗ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಮಾರ್ಚ 16ರ ವರೆಗೆ ಉಚಿತ ಗ್ಲೊಕೋಮಾ ಉಚಿತ ಶಿಬಿರ ಆಯೋಜಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೆಕು ಎಂದು ಅವರು ಹೇಳಿದರು.
ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸಂಪತ ಎಂ. ಗುಣಾರಿ ಮಾತನಾಡಿ, ಜಿಲ್ಲೆಯಲ್ಲಿ ಕಣ್ಣಿನ ತೊಂದರೆಯಿಂದ ಬಳಲುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದಕ್ಕೆ ಪ್ರತಿವಾರ 60 ರೋಗಿಗಳ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಬಿ.ಎಲ್.ಡಿ.ಇ ಡಿಮ್ಡ್ ವಿವಿ ಶ್ರೀ ಬಿ. ಎಂ. ಪಾಟೀಲ್ ವೈದ್ಯಕೀಯ ಆಸ್ಪತ್ರೆ ಹೆಚ್ಚಿನ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ದೃಷ್ಠಿದೋಷ ಹೊಂದಿರುವ ರೋಗಿಗಳಿಗೆ ಸ್ಪಂದಿಸುತ್ತಿದೆ ಎಂದು ಹೇಳಿದರು.
ಬಿ.ಎಲ್.ಡಿ.ಇ ಡಿಮ್ಡ್ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಗ್ಲೊಕೋಮಾ ಜಾಗೃತಿ ಕರಪತ್ರಗಳನ್ನು ಬಿಡಗಡೆ ಮಾಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಡಾ. ಸುನೀಲ ಜಿ. ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.