ಬಿಜೆಪಿ ಜಿಲ್ಲಾ ವಕ್ತಾರರಾಗಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ನೇಮಕ
ಬೀದರ್:ಮಾ.2:ಹಿರಿಯ ಪತ್ರಕರ್ತ ಸದಾನಂದ ಜೋಶಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಸೇರ್ಪಡೆ ಬೆನ್ನಲ್ಲಿಯೇ ಜೋಶಿ ಅವರನ್ನು ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಿಸಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರ ನಿರ್ದೇಶನದಂತೆ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಸೋಮನಾಥ ಪಾಟೀಲ್ ಹುಡಗಿ ಅವರು ಸದಾನಂದ ಜೋಶಿ ಅವರನ್ನು ಜಿಲ್ಲಾ ವಕ್ತಾರರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.ಕೂಡಲೇ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.
ಶಾಸಕರ ಹರ್ಷ
ದೇಶದ ಹಿತ, ಸಮಗ್ರ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ದುಡಿಯುತ್ತಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು, ಭಾರತ ವಿಶ್ವ ಗುರುವಾಗಿ ವಿಶ್ವಕ್ಕೆ ಮಾರ್ಗದರ್ಶನ ಮಾಡುವ ಕನಸು ನನಸಾಗಿಸುವ ಕಾರ್ಯದಲ್ಲಿ ಭಾಗಿಯಾಗಬೇಕೆಂಬ ಹಾಗೂ ಮುಂದೆ ಬಿ.ವೈ.ವಿಜಯೇಂದ್ರ ಸಾರಥ್ಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕೆಂಬ ಧ್ಯೇಯದಿಂದ ಬಿಜೆಪಿ ಸೇರಿದ್ದೇನೆ. ಜಿಲ್ಲಾ ವಕ್ತಾರರನ್ನಾಗಿ ನೇಮಿಸಿದ್ದಕ್ಕಾಗಿ ಪಕ್ಷದ ಎಲ್ಲ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನಗೆ ನೀಡಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಲು ಹಗಲಿರುಳು ದುಡಿಯುತ್ತೇನೆ. ಬರುವ ಲೋಕಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದ ಪಕ್ಷದ ಅಭ್ಯರ್ಥಿಯನ್ನು ಭರ್ಜರಿಯಾಗಿ ಗೆಲ್ಲಿಸುವುದೇ ಸದ್ಯದ ನಮ್ಮ ಗುರಿ.
-ಸದಾನಂದ ಜೋಶಿ
ಜಿಲ್ಲಾ ಬಿಜೆಪಿ ವಕ್ತಾರರು