ಮಾನವ ಸರಪಳಿ ಕಾರ್ಯಕ್ರಮ ಯಶಸ್ಸಿಗೆ ಕರೆ
ಗದಗ, ಸೆ14: ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ಸುವ್ಯವಸ್ಥಿತವಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರನ್ಸ ಹಾಲ್‍ದಲ್ಲಿ ಶುಕ್ರವಾರ ಜರುಗಿದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಸೆಪ್ಟೆಂಬರ್ 15 ರಂದು ಮಾನವ ಸರಪಳಿ ಕಾರ್ಯಕ್ರಮ ಜರಗುತ್ತಿದ್ದು ಗದಗ ಜಿಲ್ಲೆಯ ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ ತಾಲೂಕಿನಲ್ಲಿ ಮಾನವ ಸರಪಳಿ ಹಾದು ಹೋಗುತ್ತಿದ್ದು ಪ್ರತಿ ಕಿಲೋ ಮೀಟರ್‍ಗೆ ಒಬ್ಬರು ನೂಡಲ್ ಅಧಿಕಾರಿಯನ್ನು ನೇಮಿಸಬೇಕು. ಅಂದು ಬೆಳಿಗ್ಗೆ 9.30 ಗಂಟೆಗೆ ಎಲ್ಲರೂ ಸರದಿ ಸಾಲಿನಲ್ಲಿ ನಿಂತ ನಂತರ ನಾಡಗೀತೆ ಹಾಡುವುದು. ಸಂವಿಧಾನ ಪೀಠಿಕೆ ಓದುವುದು ನಂತರ ಮಾನವ ಸರಪಳಿ ಕಾರ್ಯಕ್ರಮ ಜರುಗಲಿದೆ ಎಂದರು.
ಆಯಾ ತಾಲೂಕಿನ ತಹಶಿಲ್ದಾರರು ಮತ್ತು ತಾ.ಪಂ ಕಾರ್ಯನಿರ್ವಾಹಕರು ಒಳಗೊಂಡು ಸಂಪೂರ್ಣ ಯೋಜನೆ ಜೊತೆಗೆ ಸೂಕ್ಷ?ಮ ಯೋಜನೆ ತಯಾರಿಸಿ ಮಾನವ ಸರಪಳಿ ಹಾದುಹೋಗುವ ಗ್ರಾಮ ಸೇರಿದಂತೆ,10 ಕಿಲೋ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಾಮಸಭೆಯನ್ನು ನಡೆಸಬೇಕು. ಸದರಿ ಕಾರ್ಯಕ್ರಮದ ಕುರಿತು ಡಂಗುರ ಸಾರಬೇಕು ಹಾಗೂ ಕಾರ್ಯಕ್ರಮದ ದಿನದಂದು ಮಾನವ ಸರಪಳಿಯ ಹಾದು ಹೋಗುವ 10 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರಕಾರಿ ಶಾಲೆಗಳಲ್ಲಿ ಬಿಸಿ ಊಟದ ವ್ಯವಸ್ಥೆ ಮಾಡಿಸಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಪಿಡಿಓ, ನರೇಗಾ, ಗ್ರಾಮ ಪಂಚಾಯತ್ ಅಧಿಕಾರಿ ಸಿಬ್ಬಂದಿಗಳು ಅವಶ್ಯಕ ಪೂರ್ವಸಿದ್ದತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ ಅವರು ಮಾತನಾಡಿ, ಪೊಲೀಸ್ ಇಲಾಖೆಯ ಪಿ ಎಸ್ ಐ, ಡಿ ವಾಯ್ ಎಸ್ ಪಿ ಮತ್ತು ಸಂಚಾರಿ ಪೊಲೀಸ್‍ಗಳು ಕಾರ್ಯನಿವಹಿಸಿ ಮಾನವ ಸರಪಳಿಗೆ ಸಂಪೂರ್ಣ ಬಂದೂಬಸ್ತ್ ಒದಗಿಸಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಮಾನವ ಸರಪಳಿಯ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಡಿಕೊಳ್ಳಬೇಕು. ಮಾನವ ಸರಪಳಿಯ ನೋಂದಣಿಗೆ ತಮ್ಮ ಕುಟುಂಬದ ಸದಸ್ಯರು, ನೆರೆಹೊರೆಯವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ hಣಣಠಿs//ತಿತಿತಿ.ಜemoಛಿಡಿಚಿಛಿಥಿಜಚಿಥಿಞಚಿಡಿಟಿಚಿಣಚಿಞಚಿ.iಟಿ/ಡಿegisಣಡಿಚಿಣioಟಿ ನಲ್ಲಿ ಆನ್‍ಲೈನ್ ರೆಜಿಸ್ಟ್ರೇಶನ್ ಮಾಡಿಸಿ ಜಿಲ್ಲೆಗೆ ಉತ್ತಮ ಸ್ಥಾನ ತರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್ ಬಾರಟಕ್ಕಿ, ವಿವಿಧ ತಾಲೂಕಿನ ತಹಶಿಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಹಾಜರಿದ್ದರು.