ಬಾಲ್ಯ ಮತ್ತು ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಕುರಿತು ಜಾಗೃತಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೩೧;ಪಾನ್-ಇಂಡಿಯಾ ರೆಸ್ಕೊ ಅಂಡ್ ರಿಹಾಬಿಲಿಟೇಷನ್ ಕ್ಯಾಂಪೇನ್ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಬಾಲ್ಯ ಹಾಗೂ ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು.ಚಿತ್ರದುರ್ಗ ನಗರದ ವಿವಿಧ ವಾಣಿಜ್ಯ ಸಂಸ್ಥೆಗಳು ಅಂಗಡಿ ಮತ್ತು ಬಾರ್ ಅಂಡ್ ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಲೀಕರಿಗೆ ಮೂಡಿಸಲಾಯಿತು.ತಂಡದಲ್ಲಿ ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಶಿಕ್ಷಣ ಇಲಾಖೆಯ ಬಿಆರ್‌ಪಿ ಮೈಲಾರಪ್ಪ, ಪೊಲೀಸ್ ಇಲಾಖೆಯ ಶೃಂಗಾರ ಸಾಗರ, ಮಕ್ಕಳ ಸಹಾಯವಾಣಿ ಸಿಬ್ಬಂದಿ ರುದ್ರೇಶ್ ಇದ್ದರು