ದೇಶದ ಕೀರ್ತಿಯನ್ನು ಹೆಚ್ಚಿಸಿದ ಧ್ಯಾನ್ ಚಂದ್
ಸಂಜೆವಾಣಿ ವಾರ್ತೆ
ಶಿವಮೊಗ್ಗ. ಆ. ೩೦ :ವಿಶ್ವ ಮಟ್ಟದಲ್ಲಿ ಭಾರತದ ಹಾಕಿ ತಂಡವನ್ನು ಗುರುತಿಸುವಂತೆ ಮಾಡಿದ ಶ್ರೇಷ್ಠ ಆಟಗಾರ ಎಂದರೆ ಅದು ಧ್ಯಾನಚಂದ್ ಎಂದು ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್.ತಿಳಿಸಿದರು.ಅವರು  ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಧ್ಯಾನ್ ಚಂದ್ ಅವರ 119ನೇ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು ದೇಶದ ಕೀರ್ತಿಯನ್ನು ಹೆಚ್ಚಿಸಿದ ಧ್ಯಾನ್ ಚಂದ್ ಅವರು ಒಲಂಪಿಕ್ ನಲ್ಲಿ ಸಾಲು ಸಾಲು ಚಿನ್ನದ ಪದಕ ತಂದುಕೊಟ್ಟು ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.   ಸ್ಮರಿಸುವುದರ ಜೊತೆಗೆ, ಕ್ರೀಡಾ ರಂಗದ ಬಗ್ಗೆ ಅವಲೋಕನ ಮಾಡುವ ದಿನ ಇದಾಗಿದೆ. ಇತ್ತೀಚಿಗೆ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನಕ್ಕೆ ಅವರ ಹೆಸರಿಂದ ಕೊಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಮಾಲತೇಶ್, ಶಿಕ್ಷಕರಾದ ಹರೀಶ್, ವಿಶ್ವನಾಥ್, ಶ್ರೀಮತಿ ಚಂದ್ರಿಕಾ,  ಗೀತಾ, ರಾ. ಹ. ತಿಮ್ಮೇನಹಳ್ಳಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.