ಆರೋಗ್ಯದ ಕುರಿತು ಅರಿವು ತಪಾಸಣೆ ಕಾರ್ಯಕ್ರಮ
ಗದಗ,ಆ.23: ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಂಬಾಕು ವ್ಯಸನ ಮಾದಕ ವಸ್ತುಗಳ ಸೇವನೆಯನ್ನು ತ್ಯಜಿಸಿ ಒಳ್ಳೆಯ ಆಹಾರ ಸೇವಿಸಿ ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಅವರು ಹೇಳಿದರು.
ಗದಗ ಬೆಟಗೇರಿ ನಗರ ಸಭೆ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ,ರಾಷ್ಷ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ,ಜಿಲ್ಲಾ ಎನ್.ಸಿ.ಡಿ. ವಿಭಾಗ, ಎನ್.ಟಿ.ಈ.ಪಿ. ಕಾರ್ಯಕ್ರಮ , ನಗರ ಸಭೆ ಗದಗ ಬೆಟಗೇರಿ, ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಪೌರಕಾರ್ಮಿಕರಿಗೆ ಆರೋಗ್ಯದ ಅರಿವು ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂಬಾಕು ಸೇವನೆಯಿಂದ ಕ್ಯಾನ್ಸರ್ , ಹೃದಯ ಸಂಬಂಧಿ ಕಾಯಿಲೆಗಳು, ಪ್ಯಾರಲೈಸೀಸ್,ಡಯಾಬಿಟೀಸ್, ಟಿ.ಬಿ. ಎಂಬ ಮಾರಕ ಕಾಯಿಲೆಗಳಿಗೆ ಬಲಿಯಾಗುತ್ತಿದ್ದು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.
ಗದಗ ಬೆಟಗೇರಿ ನಗರಸಭೆಯ ಪರಿಸರ ಅಭಿಯಂತರಾದ ಆನಂದ ಬದಿ ಮಾತನಾಡಿ ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಈ ರೀತಿಯ ಆರೋಗ್ಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಬಹಳ ಅವಶ್ಯಕ ಹಾಗೂ ಉಪಯುಕ್ತವಾಗಿದ್ದು ಎಲ್ಲ ಪೌರ ಕಾರ್ಮಿಕ ಸಿಬ್ಬಂದಿಗಳು ಕಾರ್ಯಕ್ರಮದ ಸದುಪಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಮಾತನಾಡಿ ತಂಬಾಕು ಸೇವನೆಯಿಂದಾಗುವ ದುಷ್ಟಪರಿಣಾಮವನ್ನು ತಿಳಿಸಿ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ2003ರ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ರವಿ ಕಡಗಾವಿ,ಡಾ.ಮಹೇಶ. ನಗರಸಭೆ ಹಿ.ಆ.ನಿರೀಕ್ಷಕರು ಎಂ.ಎಂ.ಮಕಾಂದಾರ, ಹಿ.ಆ.ನಿರೀಕ್ಷಣಾಧಿಕಾರಿ ವೈ.ಎನ್.ಕಡೆಮನಿ, ಡಾ.ಸೌಮ್ಯ, ಡಾ.ಬಸವರಾಜ ಶೆಟ್ಟರ್,ಡಾ.ಮಂಜುನಾಥ, ಪ್ರವೀಣ, ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಬಸಮ್ಮ ಚಿತ್ತರಗಿ, ಶಿವಕುಮಾರ ಬಗಾಡೆ, ಪೈಯಾಜ್ ಮಕಾಂದಾರ, ಉಪಸ್ಥಿತರಿದ್ದರು.