ಪೋಲೆಂಡ್ ವೀಸಾ ಭರವಸೆ ನೀಡಿ ವಂಚನೆ: ಪ್ರಕರಣ ದಾಖಲು

ಕಾಸರಗೋಡು-ಪೋಲೆಂಡ್‌ನಲ್ಲಿ ಉದ್ಯೋಗ ವೀಸಾ ನೀಡುವ ಭರವಸೆ ನೀಡಿ ೧೫ ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಜಪುರ ಕೋಟ್ಟೋಡಿ ಪಾಲಪುಳಿಯಿಲ್ ನಿವಾಸಿ ಕೆ.ಜೆ.ರಾಜೇಶ್ ನೀಡಿದ ದೂರಿನಂತೆ ಎರ್ನಾಕುಳಂ ಕಲ್ಲೂರು ಶ್ರೀಪದ್ವಂ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಸಿಮ್‌ಲಾಲ್ ರಾಜೇಂದ್ರನ್ ವಿರುದ್ಧ ರಾಜಪುರ ಪೊಲೀಸರು ಕೇಸು ದಾಖಲಿಸಿದ್ದಾರೆ.
ನನಗೆ ಹಾಗೂ ಸಹೋದರಿ ಪತಿಗೆ ಪೋಲೆಂಡ್‌ನಲ್ಲಿ ಉದ್ಯೋಗ ವೀಸಾ ನೀಡುವ ಭರವಸೆ ನೀಡಿ ೧೫ ಲಕ್ಷ ರೂ. ನಗದು, ಎಸ್‌ಎಸ್‌ಎಲ್‌ಸಿ ಸರ್ಟಿಫಿಕೆಟ್ ಮತ್ತು ಪಾಸ್‌ಪೋರ್ಟ್‌ಗಳನ್ನು ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿತ್ತು.