ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷರಾಗಿಜೋಗಿನ ಚಂದ್ರಪ್ಪ ನೇಮಕ
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಅ,9- ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ತಾಲೂಕಿನ ಸಂಗನಕಲ್ಲು ಗ್ರಾಮದ ಜೋಗಿನ ಚಂದ್ರಪ್ಪ ಅವರನ್ನು ನೇಮಕ ಮಾಡಲಸಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ‌ಶಿವಕುಮಾರ್ ಅವರ ಅನುಮೋದನೆಯಂತೆ ಪದವೀಧರ ವಿಭಾಗದ ರಾಜ್ಯ ಅಧ್ಯಕ್ಷ ಎ.ಎನ್.ನಟರಾಜಗೌಡ ಅವರು ಜೋಗಿನ ಚಂದ್ರಪ್ಪ ಅವರನ್ನು ನೇಮಕ ಮಾಡಿದ್ದಾರೆ.
ತಮ್ಮ ನೇಮಕದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಚಂದ್ರಪ್ಪ ಜಿಲ್ಲೆಯಲ್ಲಿನ ಪಕ್ಷದ ಎಲ್ಲ ಹಿರಿ, ಕಿರಿಯರ ಸಹಕಸರದಿಂದ ಪಕ್ಷದ ಸಂಘಟನೆಗೆ ಶ್ರಮಿಸಲಿರುವೆ ಎಂದಿದ್ದಾರೆ.