ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) 1,30,000 ಕ್ಯುಸೆಕ್‌ ನೀರನ್ನು ಹರಿ ಬಿಟ್ಟಿದ್ದರಿಂದ ಕಾವೇರಿ ನದಿ (Cauvery River) ರೌದ್ರ ನರ್ತನದೊಂದಿಗೆ ಹರಿಯುತ್ತಿದೆ. ಈ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತಗೊಂಡಿದೆ.ಶುಕ್ರವಾರ ನಿಮಿಷಾಂಭ ದೇವಸ್ಥಾನದ (Nimishamba Temple) ಸ್ನಾನಘಟ್ಟ ಮುಳುಗಡೆಯಾಗಿತ್ತು. ಇಂದು ದೇವಸ್ಥಾನದ ಮುಂಭಾಗ, ಪಾರ್ಕಿಂಗ್ ಸ್ಥಳ, ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ. ಭಕ್ತರಿಗೆ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆಶ್ರೀರಂಗಪಟ್ಟಣದ (Srirangapatna) ಗೋಸಾಯ್ ಘಾಟ್ (Ghosai Ghat) ಸಂಪೂರ್ಣ ಮುಳುಗಡೆಯಾಗಿದೆ. ಪಿಂಡಪ್ರಧಾನ, ಹೋಮ ಹವನ‌ ಇತರೆ ಪೂಜಾ ಕೈಂಕರ್ಯಗಳಿಗೆ ಗೋಸಾಯ್ ಘಾಟ್ ಪ್ರಸಿದ್ಧಿ ಪಡೆದುಕೊಂಡಿದೆ. ಅಲ್ಲದೇ ಸಿನಿಮಾ ಚಿತ್ರೀಕರಣಗಳು ಇಲ್ಲಿ ನಡೆಯುತ್ತಿದ್ದವು. ಇದೀಗ ಕಾವೇರಿ ಭೋರ್ಗರೆತಕ್ಕೆ ಗೋಸಾಯ್ ಘಾಟ್ ಸಂಪೂರ್ಣ ಮುಳುಗಡೆಯಾಗಿದೆ.‌ ಇಲ್ಲಿನ ಕಾಶಿ ವಿಶ್ವನಾಥ, ಶ್ರೀಕೃಷ್ಣ, ಶಿವ, ಆಂಜನೇಯ, ಗಣಪತಿ ದೇವಸ್ಥಾನಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ: ಕಾಫಿನಾಡಲ್ಲಿ ಮಳೆಯ ಅಬ್ಬರ – ಕೋಡಿ ಬಿದ್ದ ಇತಿಹಾಸ ಪ್ರಸಿದ್ಧ ಮದಗದ ಕೆರೆಗೋಸಾಯ್ ಘಾಟ್‌ಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು ನಡೆಯುತ್ತಿದ್ದ ಪಿಂಡಪ್ರಧಾನ ಹಾಗೂ ಇತರ ಕೈಂಕರ್ಯಗಳಿಗೆ ನಿಷೇಧ ಹೇರಲಾಗಿದೆ. Sign in to your account
Username or Email Address


Password

 Remember Me


