– ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ 10.47 ಕೋಟಿ ರೂ. ಅನುದಾನ ನಿಗದಿಬೆಂಗಳೂರು: ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು (Health Insurance Scheme) ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮರಿಗೌಡನಿಂದ ಸಿದ್ದರಾಮಯ್ಯಗೆ ಕಳಂಕ – ಸಿಎಂ ಬಾಲ್ಯ ಸ್ನೇಹಿತನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಸಂತಸದ ಸಂಗತಿ ಆಗಿದೆ ಎಂದರು. ರಾಜ್ಯದಲ್ಲಿ ಸದ್ಯ 57.91 ಲಕ್ಷ ಹಿರಿಯ ನಾಗರಿಕರಿದ್ದಾರೆ. ಇಲಾಖೆಗೆ 2024 -25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10.47 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ಒಂದು ದಿನವಾದ್ರೂ ನನ್ನನ್ನ ಜೈಲಿಗೆ ಕಳಿಸಲು ರಾಜ್ಯ ಸರ್ಕಾರದಿಂದ ಸಂಚು – ಹೆಚ್‌ಡಿಕೆ ಗಂಭೀರ ಆರೋಪರಾಜ್ಯದಲ್ಲಿ ಅಶಕ್ತ ಮತ್ತು ನಿರ್ಗತಿಕ ಹಿರಿಯ ನಾಗರಿಕರಿಗಾಗಿ ಸ್ವಯಂಸೇವಾ ಸಂಸ್ಥೆಗಳ ಮೂಲಕ ರಾಜ್ಯದೆಲ್ಲೆಡೆ 63 ವೃದ್ಧಾಶ್ರಮಗಳನ್ನು ತೆರೆದಿದೆ. ಸದ್ಯ 1,575 ಮಂದಿ ಅಶಕ್ತ ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಕೇಂದ್ರ ಸರ್ಕಾರದಿಂದ ನಡೆಸುತ್ತಿರುವ ವೃದ್ಧಾಶ್ರಯಗಳಲ್ಲೂ ಹಿರಿಯ ನಾಗರಿಕರಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಅವರಿಗಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸಹಾಯವಾಣಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಿಬ್ಬಂದಿಗೆ ಶೇ.50ರಷ್ಟು ಗೌರವ ಧನ ಹೆಚ್ಚಿಸಲಾಗಿದೆ ಎಂದರು.  ಇದನ್ನೂ ಓದಿ: ಮುಡಾ ಸೈಟು ವಿವಾದ | ಸಿಎಂ ಪತ್ನಿಯ 14 ಮುಡಾ ನಿವೇಶನಗಳ ಖಾತೆ ರದ್ದುಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಅವರು ಅಶಕ್ತರಲ್ಲ ಸಶಕ್ತರು. ಹಿರಿಯರನ್ನು ಗೌರವಿಸುವುದು, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯರ ಬಗ್ಗೆ ಸಾಮಾಜಿಕ ಕಳಕಳಿ ಅತ್ಯಾವಶ್ಯಕ. ಯುವ ಜನಾಂಗಕ್ಕೆ ಹಿರಿಯರ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಅತ್ಯಗತ್ಯ ಎಂದು ನುಡಿದರು.  ಇದನ್ನೂ ಓದಿ: ನಸ್ರಲ್ಲಾ ಹತ್ಯೆ ಬಳಿಕ ಹಿಜ್ಬುಲ್ಲಾ ಪ್ರತೀಕಾರದ ದಾಳಿ – ಮೊಸಾದ್‌ ಹೆಡ್‌ಕ್ವಾರ್ಟಸ್‌ ಮೇಲೆ ಅಟ್ಯಾಕ್‌ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಇಲಾಖಾ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಟಿ. ರಾಘವೇಂದ್ರ, ವಿಕಲಚೇತನರ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ಖ್ಯಾತ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.  ಇದನ್ನೂ ಓದಿ: ಅಕ್ಟೋಬರ್ 3ಕ್ಕೆ PSI ಪರೀಕ್ಷೆ; ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ, ENT ವೈದ್ಯರ ನಿಯೋಜನೆ: – ಕೆಇಎSign in to your account
Username or Email Address


Password

 Remember Me


