ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ `ಸಿ’ ಮತ್ತು `ಡಿ’ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100 ಮೀಸಲಾತಿ (Reservation For Kannadigas) ನೀಡುವ ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಗಳವಾರ ಸಂಜೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದನ್ನ ಬುಧವಾರ ಡಿಲೀಟ್ ಮಾಡಿದ್ದಾರೆ.ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ… pic.twitter.com/Rz6a0vNCBz— Siddaramaiah (@siddaramaiah) July 17, 2024ಸಿಎಂ ಟ್ವೀಟ್‌ಗೆ ಖಾಸಗಿ ಉದ್ಯಮ ವಲಯದಿಂದ (Private Sector) ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆಯಾಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆಯಾಗುತ್ತದೆ ಎಂದು ಉದ್ಯಮಿಗಳು ಆಕ್ಷೇಪ ಎತ್ತಿದ್ದರು. ಕೆಲವರಂತೂ ಇದು ತಾರತಮ್ಯದ ಮಸೂದೆ ಎಂದು ಆಕ್ಷೇಪ ವ್ಯಕ್ತಪಸಿಡಿದ್ದರು. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ; ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಮಂಡನೆಗೆ ಗ್ರೀನ್ ಸಿಗ್ನಲ್ಉದ್ಯಮ ವಲಯದಲ್ಲಿ ಆಕ್ಷೇಪ ಕೇಳಿಬಂದ ನಂತರ ಎಚ್ಚೆತ್ತ ಸಿಎಂ ಬುಧವಾರ ಎಕ್ಸ್ ಪೋಸ್ಟ್ ಅನ್ನು ಅಳಿಸಿಹಾಕಿದ್ದಾರೆ. ಜೊತೆಗೆ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ! ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ? 
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು – ಬಿಜೆಪಿ ನಾಯಕ ಸುವೆಂದು ಅಧಿಕಾರಿSign in to your account
Username or Email Address


Password

 Remember Me


