ರಾಮನಗರ: ಜಿಲ್ಲೆಯ ಹೆಸರು ಮರುನಾಮಕರಣ ವಿಚಾರಕ್ಕೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್ ಮಂಜುನಾಥ್ (Dr CN Manjunath) ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಬದಲಿಸದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.ರಾಮನಗರಕ್ಕೆ (Ramanagara) ಭಾವನಾತ್ಮಕ, ಐತಿಹಾಸಿಕ ಹಿನ್ನೆಲೆಯಿದೆ. ಅಭಿವೃದ್ಧಿ ಮಾಡಬೇಕಾದರೆ ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರ್ಯಾಂಡ್ ರಾಮನಗರವನ್ನಾಗಿ ಮಾಡಿ. ಹಾಗಿದ್ದಾಗ ಮಾತ್ರ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ; ತೆಂಡೂಲ್ಕರ್‌, ಜಾನ್‌ ಸೀನಾ ಭಾಗಿ ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದೆ. ಇಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ದುಸ್ತರವಾಗಿದೆ. ಈ ಪರಿಸ್ಥಿತಿಯಲ್ಲಿ ಸುಂದರವಾಗಿ ಬೆಳೆಯುತ್ತಿರುವ ರಾಮನಗರವನ್ನು ನಗರ ಪ್ರದೇಶಕ್ಕೆ ಸೇರ್ಪಡೆ ಮಾಡುವ ನಿರ್ಧಾರ ಅವೈಜ್ಞಾನಿಕ ಎಂದಿದ್ದಾರೆ. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನರಾಮನಗರ ಜಿಲ್ಲೆ ರೈತರ ಜಿಲ್ಲೆಯಾಗಿ ಉಳಿಯಬೇಕು. ಅದನ್ನ ಬಿಟ್ಟು ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿ ಬೆಲೆ ಅಧಿಕಕ್ಕಿಂತ ರೈತರ ಬೆಳೆಯ ಬೆಲೆ ಅಧಿಕವಾಗಬೇಕು. ಈ ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಸಿಎಂಗೆ ಪತ್ರದ ಮೂಲಕ ಮಂಜುನಾಥ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮುಡಾ ಅಕ್ರಮ: ಸಿಎಂ ರಾಜೀನಾಮೆ ಕೊಡುವವರೆಗೂ ಬಿಜೆಪಿಯಿಂದ ಹೋರಾಟ – ವಿಜಯೇಂದ್ರ






 Advertisement 




Sign in to your account
Username or Email Address


Password

 Remember Me


