ದಾವಣಗೆರೆ: ಕೃಷಿ ಹೊಂಡಕ್ಕೆ (Agricultural Pond) ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆ ಜಗಳೂರಿನ (Jagalur) ಅಸಗೋಡು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ದಾಸರಹಳ್ಳಿಯಲ್ಲಿ ತಲೆಯೆತ್ತಿದ್ದ ಗುಂಡಿ ಸಮಸ್ಯೆ – ಡೆಡ್‌ಲೈನ್ ಮುಗಿದರೂ ದುರಸ್ತಿಯಿಲ್ಲಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌Sign in to your account
Username or Email Address


Password

 Remember Me


