ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ (Dakshina Kannada Rain) ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ (Trekking prohibited) ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿಷೇಧ ಆದೇಶ ಹೊರಡಿಸಿದ್ದು, ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ (Home Stay, Resorts) ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರೆಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹೇರಲಾಗಿದೆ. ಇದರ ಜೊತೆಗೆ ನದಿ, ಸಮುದ್ರ ತೀರಕ್ಕೆ ಜನ ತೆರಳದಂತೆ ಸೂಚನೆ‌ ನೀಡಲಾಗಿದೆ. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯೋದು, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.Sign in to your account
Username or Email Address


Password

 Remember Me


