ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿಯಲ್ಲಿ ನಡೆದಿದೆ.ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಬಳಿಯ ಅರೆಕಾಡು ರಸ್ತೆಯಲ್ಲಿರುವ ವಿವೇಕ್ ಅಪ್ಪಯ್ಯರವರ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಗಂಡಾನೆಯ ಶವ ಪತ್ತೆಯಾಗಿದೆ. ಇದನ್ನೂ ಓದಿ: ಅಮ್ಮನ ಜೊತೆ ಮಲಗಿದ್ದವನ ಮರ್ಮಾಂಗವನ್ನೇ ಬ್ಲೇಡ್‍ನಿಂದ ಕಟ್ ಮಾಡಿದ ಮಗಳು!ಭಾನುವಾರ ಸುರಿದ ಭಾರೀ ಮಳೆಗೆ ಕಾಫಿ ತೋಟದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗೆ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ವಿದ್ಯುತ್ ಕಂಬವು ಸಹಿತ ಮುರಿದು ಬಿದ್ದಿದೆ. ಈ ವೇಳೆ ವಿದ್ಯುತ್ ತಂತಿಗೆ ಕಾಡಾನೆ ಸ್ಪರ್ಶಿಸಿದ್ದು ಆನೆಯು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನೂ ಓದಿ: 2 ವರ್ಷಗಳ ಬಳಿಕದ ದಾಖಲೆ – ಅಕ್ಷಯ ತೃತೀಯದಂದು ಭರ್ಜರಿ ಸೇಲ್ಸ್ಥಳೀಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ದುರ್ವಾಸನೆ ಬಂದಿದ್ದು ಕಾಫಿ ತೋಟದಲ್ಲಿ ಪರಿಶೀಲಿಸಿದಾಗ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಿ ಎನ್ ಎನ್ ಮೂರ್ತಿ, ಡಿ ಸಿ ಎಫ್ ಪೂವಯ್ಯ, ಎ ಸಿ ಎಫ್ ನೆಹರೂ, ಪಶುವೈದ್ಯಾದಿಕಾರಿ ಡಾ ಚೆಟ್ಟಿಯಪ್ಪ, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಕೂಡಕಂಡಿ ಸುಬ್ರಾಯ, ಕನ್ನಂಡ ರಂಜನ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


