ಮೈಸೂರು: ಎಪಿಎಂಸಿ ಏಜೆಂಟ್ ಆಗಿದ್ದ ಮಂಡ್ಯ ಮೂಲದ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಬಂಡೀಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.ಹತ್ಯೆಗೊಳಗಾದವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ನಿವಾಸಿ ರವಿ ಅಲಿಯಾಸ್ ಕ್ಯಾಪ್ಸಿಕಂ ರವಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಅಮ್ಮನ ಜೊತೆ ಮಲಗಿದ್ದವನ ಮರ್ಮಾಂಗವನ್ನೇ ಬ್ಲೇಡ್‍ನಿಂದ ಕಟ್ ಮಾಡಿದ ಮಗಳು!
ಗೌತಮ್ ಎಂಬ ವ್ಯಕ್ತಿ ಸೇರಿದಂತೆ ನಾಲ್ವರ ತಂಡದಿಂದ ಕೃತ್ಯ ಎಸಗಲಾಗಿದ್ದು, ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಎಪಿಎಂಸಿಯ ಮಳಿಗೆ ನಂ.7ರಲ್ಲಿ ವಹಿವಾಟು ನಡೆಸುತ್ತಿದ್ದ ರವಿ ಹಾಗೂ ಆರೋಪಿ ಗೌತಮ್ ನಡುವೆ ಕಮಿಷನ್ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದಕ್ಕಾಗಿ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮೊಬೈಲ್ ಜಾಸ್ತಿ ಬಳಸಬೇಡ ಅಂದಿದ್ದಕ್ಕೆ ಯುವತಿ ಆತ್ಮಹತ್ಯೆಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.Sign in to your account
Username or Email Address


Password

 Remember Me


