ನಿರ್ದೇಶಕ ಯೋಗರಾಜ್ ಭಟ್ ‘ಎಣ್ಣೆ ಸಾಂಗ್’ ಪಿತಾಮಹಾ ಆಗುವತ್ತ ದಾಪುಗಾಲು ಇಡುತ್ತಿದ್ದಾರೆ. ಒಂದರ ಮೇಲೊಂದು ಎಣ್ಣೆ ಸಾಂಗ್ ಬರೆಯುತ್ತಿದ್ದಾರೆ. ಈಗಾಗಲೇ ‘ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು’ ಹಾಡು ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಮೆಚ್ಚುಗೆಯಾಗಿತ್ತು. ಇದೀಗ “ಗಿರ್ಕಿ” ಚಿತ್ರಕ್ಕಾಗಿ “ಗ್ಲಾಸು ಗ್ಲಾಸಿಗೆ  ತಾಗೊ ಟೈಮಲಿ ದೇಶ ಚಿಂತನೆ ಮಾಡೋಣ” ಎಂಬ ಹಾಡನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿಇತ್ತೀಚೆಗೆ ಹಾಡನ್ನು ದುನಿಯಾ ವಿಜಯ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. A2 music ಸಂಸ್ಥೆ ಈ ಹಾಡನ್ನು ಹೊರತಂದಿದೆ.  ಬಿಡುಗಡೆಯಾದ ಸ್ವಲ್ಪ ಹೊತ್ತಿನಲ್ಲೇ ಈ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಎಣ್ಣೆ ಪ್ರಿಯರಿಗೆ ಮತ್ತೊಂದು ಒಳ್ಳೆಯ ಹಾಡು ಸಿಕ್ಕಿದೆ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರವನ್ನು  ಯೋಗರಾಜ್ ಭಟ್ ಅವರ ಶಿಷ್ಯ ವೀರೇಶ್ ಪಿ.ಎಂ ನಿರ್ದೇಶಿಸಿದ್ದಾರೆ‌. ಲವ್, ಥ್ರಿಲ್ಲರ್  ಹಾಗೂ ಕಾಮಿಡಿ  ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ. ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.Sign in to your account
Username or Email Address


Password

 Remember Me


