ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಜನರಿಗೆ ಮತ್ತಷ್ಟು ಹತ್ತಿರವಾಗಲು ವಿನೂತನ ಪ್ರಯತ್ನಕ್ಕೆ ಕೈಹಾಕಿದೆ. ಜನರ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲು ವಿಶೇಷವಾಗಿ ಕಲ್ಯಾಣ ಮಿತ್ರ ಎಂಬ ಸಹಾಯವಾಣಿ ಪ್ರಾರಂಭ ಮಾಡಿದೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೂತನ ಸಹಾಯವಾಣಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ಶ್ರೀರಾಮಚಂದ್ರನಿಗೂ ಟೀಕೆಗಳು ತಪ್ಪಲಿಲ್ಲ: ಬೊಮ್ಮಾಯಿಕಲ್ಯಾಣ ಮಿತ್ರ ಸಹಾಯವಾಣಿ ದಿನದ 24 ಗಂಟೆ ವಾರದ ಏಳು ದಿನಗಳು ಕಾರ್ಯ ನಿರ್ವಹಿಸಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ಇಲಾಖೆಗಳು ಒಳಗೊಂಡ ಸಹಾಯವಾಣಿ ಇದಾಗಿದೆ. ಈ ಸಹಾಯವಾಣಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಎಲ್ಲಾ ನಿಗಮ-ಮಂಡಳಿಗಳ ಮಾಹಿತಿ ಲಭ್ಯವಾಗಲಿದೆ. ಇಲಾಖೆಯ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಪಡೆಯಬಹುದು. ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯ ಮಾಹಿತಿ ಪಡೆಯಬಹುದಾಗಿದೆ. ಇಲಾಖೆಯ ವಿವಿಧ ಸೌಲಭ್ಯಗಳನ್ನು ಪಡೆಯೋ ರೀತಿ ಬಗ್ಗೆ ಮಾಹಿತಿ ಸಿಗಲಿದೆ. ಇಲಾಖೆಯ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಬಿಜೆಪಿ ಪಕ್ಷಕ್ಕೆ ಬೂತ್ ಮಟ್ಟದಲ್ಲೇ ರೀಚಾರ್ಜ್: ಸುನಿಲ್ ಕುಮಾರ್ಸಹಾಯವಾಣಿಯ ನಂಬರ್
9482300400
080-22634300
Twitter-@SWDGok
Facebook-@socialWelfareDeprtment
Wts up- 9482300400Sign in to your account
Username or Email Address


Password

 Remember Me


