ಶೋಕ್ದಾರ್ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ಸಿಕ್ಕಿದೆ. ಧನ್ವೀರ್ ಗೆ ನಾಯಕಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಚಿತ್ರತಂಡ ಉತ್ತರ ಸಿಕ್ಕಿದೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರಶಂಕರ್ ರಾಮನ್ ನಿರ್ದೇಶನದಲ್ಲಿ  ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್ತಮ್ಮ ಪಾತ್ರದ ಬಗ್ಗೆ ಹೆಚ್ಚೇನೂ ಗುಟ್ಟುಬಿಟ್ಟು ಕೊಡದ ರಚನಾ,  ಬಬ್ಲಿ ಪಾತ್ರದ ಮೂಲಕ ಅಭಿಮಾನಿಗಳನ್ನು ರಂಜಿಸುವುದಾಗಿ ಹೇಳಿಕೊಂಡಿದ್ದಾರೆ.  ಬ್ಯಾಡ್ಮಿಂಟನ್ ಫ್ಲೈಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ.  ಇದನ್ನೂ ಓದಿ : ನಟ ಶಾರುಖ್ ಖಾನ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್ಸದ್ಯ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ನಾಯಕಿಯಾಗಿ ನಟಿಸ್ತಿರುವ ರಚನಾ ರೈ, ಈಗಾಗಲೇ ಸೆಕೆಂಡ್ ಶೆಡ್ಯೂಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್​ ಆಕ್ಷನ್ ಎಂಟರ್​ಟೇನರ್ ವಾಮನ ಸಿನಿಮಾಗೆ ಚೇತನ್ ಕುಮಾರ್ ಬಂಡವಾಳ ಹೂಡಿದ್ದು, ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸಂಭಾಷಣಾಗಾರನಾಗಿ ಕಾರ್ಯನಿರ್ವಹಿಸಿದ್ದ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.Sign in to your account
Username or Email Address


Password

 Remember Me


