ಕೆಜಿಎಫ್ 2 ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ನಿರ್ದೇಶಕ ಪ್ರಶಾಂತ್ ನೀಲ್, ರಿಲ್ಯಾಕ್ಸ್ ಮೂಡ್ ನಿಂದ ವರ್ಕಮೂಡ್ ನತ್ತ ಶಿಫ್ಟ್ ಆಗುತ್ತಿದ್ದಾರೆ. ಕೆಜಿಎಫ್ ಸಿನಿಮಾ ಬಿಡುಗಡೆ, ಕೋವಿಡ್ ಕಾರಣದಿಂದಾಗಿ ಸಲಾರ್ ಸಿನಿಮಾದ ಶೂಟಿಂಗ್ ನಿಲ್ಲಿಸಿರುವ ಅವರು, ಮೇ ತಿಂಗಳಿಂದ ಮತ್ತೆ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬಪ್ರಭಾಸ್ ನಟನೆಯ ಸಲಾರ್ ಸಿನಿಮಾದ ಶೂಟಿಂಗ್ ಈವರೆಗೂ ಕೇವಲ ಶೇ.30ರಷ್ಟು ಅಷ್ಟೇ ಆಗಿದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಮೇ ತಿಂಗಳಿಂದ ಚಿತ್ರೀಕರಣ ಶುರು ಮಾಡಿ, ಅಂದುಕೊಂಡಂತೆ ಆದರೆ, ಇದೇ ವರ್ಷವೇ ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್ ಕೂಡ ಆಗಿದೆಯಂತೆ. ಈ ಕಾರಣಕ್ಕಾಗಿಯೇ ಪ್ರಭಾಸ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿಲ್ಲ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿಎರಡನೇ ಹಂತದ ಚಿತ್ರೀಕರಣದಲ್ಲಿ ಭಾರೀ ಬಜೆಟ್ ಬೇಡುವಂತಹ ದೃಶ್ಯಗಳನ್ನು ಸೆರೆ ಹಿಡಿಯಲಿದ್ದಾರಂತೆ ಪ್ರಶಾಂತ್ ನೀಲ್. ಒಂದು ದೃಶ್ಯಕ್ಕೇ ಅಂದಾಜು 20 ಕೋಟಿ ರೂಪಾಯಿ ಖರ್ಚು ಮಾಡಲಿದ್ದಾರೆ ಎನ್ನುವ ಅಚ್ಚರಿ ಸುದ್ದಿ ಕೂಡ ಇದೆ. ನೂರಾರು ಕೋಟಿ ಬಜೆಟ್ ಸಿನಿಮಾದಲ್ಲಿ 20 ಕೋಟಿ ಏನೂ ಅಲ್ಲದಿದ್ದರೂ, ಇದೇ ಮೊದಲ ಬಾರಿಗೆ ಈ ಪ್ರಮಾಣದ ಬಜೆಟ್ ಅನ್ನು ಒಂದೇ ಒಂದು ದೃಶ್ಯ ಬೇಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿರಾಧೆ ಶ್ಯಾಮ್ ಸಿನಿಮಾದ ಸೋಲಿನ ನೋವಿನಲ್ಲಿರುವ ಪ್ರಭಾಸ್ ಅವರಿಗೆ ಸಲಾರ್ ಕೈ ಹಿಡಿಯಬೇಕಿದೆ. ಆ ನಂಬಿಕೆ ಕೂಡ ಅವರಿಗಿದೆ. ಕೆಜಿಎಫ್ 2 ಸಿನಿಮಾದಿಂದಾಗಿ ಪ್ರಶಾಂತ್ ನೀಲ್ ಅವರಿಗೂ ಒಂದು ಮಾರ್ಕೆಟ್ ಕ್ರಿಯೇಟ್ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ಸಲಾರ್ ಮತ್ತೊಂದು ಮಹತ್ವದ ಚಿತ್ರವಾಗಲಿದೆ.Sign in to your account
Username or Email Address


Password

 Remember Me


