ರಾಮನಗರ: ಚನ್ನಪಟ್ಟಣ (Channapatna) ಟೌನ್ ವ್ಯಾಪ್ತಿಯಲ್ಲಿ ಜನಸ್ಪಂದನಾ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅವರು ನಗರದ ವಿವಿಧ ವಾರ್ಡ್‌ಗಳ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.ಇದೇ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ತಾಲೂಕಿನಲ್ಲಿ 9 ಜನಸ್ಪಂದನಾ ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ. ಈಗಾಗಲೇ 10 ಸಾವಿರ ಅರ್ಜಿಗಳು ಬಂದಿವೆ. ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆಗೆ ಪರಿಹಾರ ನೀಡಲಾಗುತ್ತಿದೆ. ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಆಗುತ್ತದೆ. ಸೈಟ್, ಮನೆ, ಖಾತೆ, ರಸ್ತೆ, ಚರಂಡಿ ಸೇರಿ ಸಾಕಷ್ಟು ಸಮಸ್ಯೆಗಳು ಗಮನಕ್ಕೆ ಬಂದಿದೆ. ಚನ್ನಪಟ್ಟಣ ಕತ್ತಲೆಯಲ್ಲಿದೆ. ಇದಕ್ಕೆ ಬೆಳಕು ಬೇಕು. ಈ ಕ್ಷೇತ್ರವನ್ನ ಅಭಿವೃದ್ಧಿ ಮಾಡೋದಕ್ಕೆ ನಾವಿಲ್ಲಿ ಬಂದಿರೋದು. ಮುಂದೊಂದು ದಿನ ಈ ಚನ್ನಪಟ್ಟಣ ಬೆಂಗಳೂರಿಗೆ ಸೇರುತ್ತೆ. ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಈ ಮಾತನ್ನ ಹೇಳ್ತಿದ್ದೇನೆ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತುಂಬುವ ಕೆಲಸ ಆಗುತ್ತೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಸೂರಜ್‌ ರೇವಣ್ಣಗೆ ಜು.18ರ ವರೆಗೆ ನ್ಯಾಯಾಂಗ ಬಂಧನಚನ್ನಪಟ್ಟಣ ಇತಿಹಾಸದಲ್ಲೇ ಇಂತಹ ಒಂದು ಕಾರ್ಯಕ್ರಮ ಆಗಿರಲಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡ್ತಿದ್ದೇವೆ. ನೀವು ಕೊಟ್ಟಿರೋ ಎಲ್ಲಾ ಅರ್ಜಿಗಳನ್ನ ವಿಲೇವಾರಿ ಮಾಡ್ತೀವಿ. ಮುಂದಿನ ದಿನ ಈ ಬಗ್ಗೆ ಅಧಿಕಾರಗಳ ಸಭೆ ಮಾಡಿ ರಿವ್ಯೂ ಮಾಡ್ತೀನಿ. ಚನ್ನಪಟ್ಟಣ ನಗರಕ್ಕೆ ಅನೇಕ ಕಾರ್ಯಕ್ರಮ ರೂಪಿಸಿ ಅಭಿವೃದ್ಧಿ ಮಾಡುತ್ತೇವೆ. ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ಟೌನ್ ನಿರ್ಮಾಣ ಮಾಡಿ ಎಲ್ಲಾ ಬಡವರಿಗೆ ಸೈಟ್ ಕೊಡುವ ಕೆಲಸ ಆಗುತ್ತೆ. ನಿಮ್ಮ ಜೊತೆ ಇನ್ಮುಂದೆ ಸಂಪರ್ಕದಲ್ಲಿರುತ್ತೇನೆ ಎಂದು ತಿಳಿಸಿದರು.ನನ್ನ ಕೈ ಬಲಪಡಿಸಿ, ನನಗೆ ಶಕ್ತಿ ತುಂಬಿ. ನಮ್ಮವರನ್ನ ಶಾಸಕರನ್ನಾಗಿ ಮಾಡಲು ಸಹಕಾರ ಕೊಡಿ. ನಿಮ್ಮ ಕೆಲಸಗಳನ್ನು ಇನ್ನೂ ಹೆಚ್ಚೆಚ್ಚು ಮಾಡುವ ಅವಕಾಶ ಕೊಡಿ. ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿ ಎಂದು ಚನ್ನಪಟ್ಟಣದಲ್ಲಿ ಡಿಸಿಎಂ ಜನತೆಯಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣSign in to your account
Username or Email Address


Password

 Remember Me


