ರಾಯಚೂರು: ತಾಲೂಕಿನ ಮಿರ್ಜಾಪುರ ಗ್ರಾಮದ ಬಳಿ ರಾಜಲಬಂಡಾ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ.ಇಂದೂ(14) ಮತ್ತು ಸುಜಾತ(13) ಮೃತ ದುರ್ದೈವಿಗಳು. ಕಾಲುವೆಯಲ್ಲಿ ನೀರು ಕಡಿಮೆ ಇದೇ ಎಂದು ತಿಳಿದು ನಾಲ್ಕು ಬಾಲಕಿಯರು ನೀರಿಗೆ ಇಳಿದಿದ್ದರು. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಈಜು ಬಾರದ ಹಿನ್ನೆಲೆ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಬಾಲಕಿಯರು ಈಜಿ ದಡ ಸೇರಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!ಬೇಸಿಗೆ ಹಿನ್ನೆಲೆ ಬಾಲಕಿಯರು ಈಜಾಡಲು ಹೋಗಿ ಮೃತಪಟ್ಟಿದ್ದಾರೆ. ಇದೀಗ ಮೃತ ದೇಹಗಳನ್ನು ಗ್ರಾಮಸ್ಥರು ಹೊರತೆಗೆದಿದ್ದಾರೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ






 Advertisement 




Sign in to your account
Username or Email Address


Password

 Remember Me


