ಬೆಂಗಳೂರು: ವಾಸವಿ ಯುವ ವೇದಿಕೆ ವತಿಯಿಂದ ಆಯೋಜಿಸಿದ್ದ 5ನೇ ವರ್ಷದ ವಾಸವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.ಸಮುದಾಯದ ಯುವಕರನ್ನು ಒಟ್ಟುಗೂಡಿಸುವ ಸಲುವಾಗಿ ಹಾಗೂ ಕ್ರೀಡಾ ಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಸಚ್ಚಿದಾನಂದ ಸರಸ್ವತಿ ಶ್ರೀಗಳು ಚಾಲನೆ ನೀಡಿದರು. ಎರಡು ದಿನಗಳ ಕಾಲ ಬಸವನಗುಡಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಟೂರ್ನಮೆಂಟ್‌ನಲ್ಲಿ ನಗರದ ವಿವಿಧ ಭಾಗಗಳ 16 ತಂಡಗಳು ಭಾಗಿಯಾಗಿವೆ.ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು ಮಾತನಾಡಿ, 33 ವರ್ಷದ ನಂತರ ಈ ಮೈದಾನದಲ್ಲಿ ಕ್ರಿಕೆಟ್ ಆಡಲು ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ವಾಸವಿ ಗ್ರೂಪ್‍ಗೆ ಅಭಿನಂದನೆ ಹೇಳಲು ಬಯಸುತ್ತೇನೆ. ಇವರು 15 ವರ್ಷಗಳಿಂದ ಪಂದ್ಯಾವಳಿಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಒಳ್ಳೊಳ್ಳೆ ಆಟಗಾರರಿದ್ದಾರೆ ಎಂದರು. ಇದನ್ನೂ ಓದಿ: ಧರ್ಮವೇ ಮುಖ್ಯ- ಹಾಲ್ ಟಿಕೆಟ್ ಪಡೆದರೂ ಪರೀಕ್ಷೆಗೆ ಬಾರದ ಉಡುಪಿಯ ಅಲ್ಮಾಸ್ಕಾರ್ಯಕ್ರಮದಲ್ಲಿ ವೇದಿಕೆ ಛೇರೆಮೇನ್ ಸುನೀಲ್, ಅಧ್ಯಕ್ಷ ರಾಮಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ – ಸ್ಫೋಟಕ ಆಡಿಯೋ ಔಟ್Sign in to your account
Username or Email Address


Password

 Remember Me


