ಕಲಬುರಗಿ: ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಮೇ 9 ರಿಂದ ಶ್ರೀರಾಮ ಸೇನೆ ಆಜಾನ್ ಸೇ ಆಜಾದಿ ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆ ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರುವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದೆ ಎಂದರು. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘಯಾವ ಯಾವ ಸಂದರ್ಭದಲ್ಲಿ ಎಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸಕ್ರ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸುವುದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೊಣ ಎಂದು ಹೇಳಿದರು. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?ಇನ್ನೂ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡುವುದಕ್ಕೆ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೆಸರು ಇಡುವ ವಿಚಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು. ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಅಸಮಾಧಾನ ಇಲ್ಲ ಅಂತ ಹೇಳಿದರು.Sign in to your account
Username or Email Address


Password

 Remember Me


