ಬೆಂಗಳೂರು: ಅಜಾನ್‌ ವಿವಾದದ ಬಿಸಿ ಇರುವಾಗಲೇ ಹಿಂದೂ ಮುಖಂಡರು ಮತ್ತೊಂದು ಬೇಡಿಕೆ ಇಟ್ಟಿದ್ದು, ಹಿಂದೂ ದೇವಾಲಯಗಳಲ್ಲಿ ಸುಪ್ರಭಾತ ಸೇವೆಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಕಳೆದ ಐದು ತಿಂಗಳಿಂದ ಧರ್ಮ ದಂಗಲ್ ನಡೆಯುತ್ತಿದೆ. ಹಿಜಬ್, ಹಲಾಲ್, ಆಜಾನ್ ಹೀಗೆ ಅನೇಕ ವಿಷಯಗಳಲ್ಲಿ ವಿವಾದ ನಡೆಯುತ್ತಿದೆ. ಇದೆಲ್ಲದರ ಬಿಸಿ ಇನ್ನೂ ಇರುವಾಗಲೇ ಹಿಂದೂ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಹರ್ಷ ಮುತಾಲಿಕ್ ಧಾರ್ಮಿಕ ದತ್ತಿಗೆ ಮನವಿ ಸಲ್ಲಿಸಿ ಪ್ರತಿದಿನ ಬೆಳಗ್ಗೆ ಸುಪ್ರಭಾತ ಸೇವೆಗೆ ಅನುಮತಿ ನೀಡಿ ಎಂದಿದ್ದಾರೆ.ಮನವಿಯಲ್ಲಿ ಏನಿದೆ?
ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಪ್ರತಿದಿನ ಬೆಳಗ್ಗೆ ಸುಪ್ರಭಾತ ಹಾಕಲು ಹಾಗೂ ವಿಶೇಷ ದಿನಗಳಲ್ಲಿ ಪೂಜೆ ಮತ್ತು ಕೈಕರ್ಯಗಳನ್ನು ಮೈಕ್‍ನ ಮೂಲಕ ಪಠಿಸಲು ಸರಿಯಾದ ಉಪಕರಣಗಳನ್ನು ಬಳಸಲು ನೀಡಬೇಕು. ಇದನ್ನೂ ಓದಿ: ಚಾರ್ಮಾಡಿ ಘಾಟ್‌ನ ದೇಗುಲದಲ್ಲಿ ಹುಂಡಿ ಹಣ ಕಳವು ಮಾಡುತ್ತಿದ್ದವನಿಗೆ ಸ್ಥಳೀಯರಿಂದ ಧರ್ಮದೇಟುದೇವಸ್ಥಾನಗಳಲ್ಲಿ ಸುಪ್ರಭಾತ, ಪೂಜಾ ಮಂತ್ರ ಪಠಿಸುವುದನ್ನು ಭಕ್ತಾದಿಗಳಿಗೆ ಮಟ್ಟಿಸಲು ಮೈಕ್ ಅಗತ್ಯವಾಗಿದೆ. ಹೀಗಾಗಿ ಲೌಡ್ ಸ್ಪೀಕರ್, ಸೌಂಡ್ ಸಿಸ್ಟಂ, ಮೈಕ್ ಅಳವಡಿಕೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ಪುರದಮ್ಮ ಕಾಯ್ತಿದ್ದಾಳೆ, ಕಾಡಿಗೆ ಬೆಂಕಿ ಹಾಕಿದರೆ ಜೀವನ ಸರ್ವನಾಶ – ಅರಣ್ಯದಲ್ಲಿ ಬ್ಯಾನರ್Sign in to your account
Username or Email Address


Password

 Remember Me


