ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಅಫ್ಜಲ್‌ಪುರ ಎಂಎಲ್‌ಎ ಎಂ.ವೈ.ಪಾಟೀಲ್ ಗನ್‌ಮ್ಯಾನ್‌ನನ್ನು ಬಂಧಿಸಲಾಗಿದೆ.ಶಾಸಕ ಎಂ.ವೈ.ಪಾಟೀಲ್ ಅವರು ಪರಿಚಯಸ್ಥರ ಮದುವೆಗೆ ತೆರಳುತ್ತಿದ್ದ ವೇಳೆ, ಕಲಬುರಗಿ ನಗರದ ರಾಮಮಂದಿರ ಬಳಿ ಗನ್‌ಮ್ಯಾನ್ ಅಣ್ಣಯ್ಯ ದೇಸಾಯಿಯನ್ನು ಬಂಧಿಸಲಾಗಿದೆ. ಶಾಸಕರನ್ನು ಕಾರಿನಿಂದ ಇಳಿಸಿದ ಪೊಲೀಸರು, ಅವರ ಮುಂದೆಯೇ ಬಂಧಿಸಿದ್ದಾರೆ. ಬಳಿಕ ಶಾಸಕರಿಗೆ ಮತ್ತೊಬ್ಬ ಗನ್‌ಮ್ಯಾನ್‌ನನ್ನು ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ
ಪಿಎಸ್‌ಐ ಪರೀಕ್ಷೆ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಈವರೆಗೆ ಮೂವರು ಕೊಠಡಿ ಮೇಲ್ವಿಚಾರಕರು, ನಾಲ್ವರು ಅಭ್ಯರ್ಥಿಗಳು ಹಾಗೂ ಜ್ಞಾನಜೋತಿ ಇಂಗ್ಲಿಷ್ ಶಾಲೆ ಅಧ್ಯಕ್ಷ ರಾಜೇಶ್ ಹಾಗರಗಿ ಸೇರಿ 8 ಮಂದಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪೈಕಿ 6 ಆರೋಪಿಗಳನ್ನು 3 ದಿನಗಳ ಕಾಲ ವಿಚಾರಣೆ ನಡೆಸಲಾಗಿದೆ. ಆದರೂ ಅಭ್ಯರ್ಥಿಗಳು ಸತ್ಯ ಬಾಯಿಬಿಟ್ಟಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ
ತಮಗೇನೂ ಗೊತ್ತಿಲ್ಲ, ತಾವು ಅಕ್ರಮ ಮಾಡಿಯೇ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ವೀರೇಶ್ ಎಂಬ ಅಭ್ಯರ್ಥಿ ಹಣ ನೀಡಿರುವ ಬಗ್ಗೆ ಹೇಳಿಕೆ ನೀಡಿದ್ದಾನೆ. ಕಿಂಗ್‌ಪಿನ್ ಮಂಜುನಾಥ ಎಂಬವನಿಗೆ 39 ಲಕ್ಷ ಹಣ ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ. ಅಕ್ರಮದ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ಬಂಧಿತ ಅಭ್ಯರ್ಥಿಗಳ ಬ್ಯಾಂಕ್ ಡಿಟೈಲ್ಸ್, ಹಣದ ವರ್ಗಾವಣೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.Sign in to your account
Username or Email Address


Password

 Remember Me


