ತುಮಕೂರು: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ.ಶಿರಾ ಕ್ಷೇತ್ರದ‌ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಕಾರು ರಾತ್ರಿ 1 ಗಂಟೆಯ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇದನ್ನೂ ಓದಿ: ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯತುಮಕೂರು ತಾಲೂಕಿನ ಸಿಬಿ ಬಳಿ ಕಾರು ಉರುಳಿಬಿದ್ದಿದ್ದು, ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗನ್ ಮ್ಯಾನ್ ಹಾಗೂ‌‌ ಕಾರು ಚಾಲಕ ಅಪಘಾತದಿಂದ ಪಾರಾಗಿದ್ದಾರೆ.Sign in to your account
Username or Email Address


Password

 Remember Me


