ಗಾಳಿಪಟ 2 ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿ, ಇದೀಗ ಗರಡಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ಯೋಗರಾಜ್ ಭಟ್ಟರು ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಭಟ್ಟರ ಗರಡಿಯಿಂದ ಬಂದಿದೆ. ಈ ಸಿನಿಮಾ ಆಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕಾದರೂ, ಕೆಲ ಕಾರಣಗಳಿಂದಾಗಿ ಈ ಸುದ್ದಿ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ : ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್ಹೊಸ ಸುದ್ದಿಯ ಪ್ರಕಾರ ಯೋಗರಾಜ್ ಭಟ್ ನಿರ್ದೇಶನದ ಈ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ್ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕೆಲ ತಿಂಗಳ ಹಿಂದೆಷ್ಟೇ ಪ್ರಭುದೇವ್ ನಟನೆಯ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಪಾತ್ರ ಮಾಡಿದ್ದರು. ಇದೀಗ ಪುನೀತ್ ಅವರ ಸಹೋದರ ಶಿವರಾಜ್ ಕುಮಾರ್ ಜತೆ ಪ್ರಭದೇವ ನಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದ್ಧೂರಿಯ ತಾರಾಗಣವೇ ಸಿನಿಮಾದಲ್ಲಿ ಇರಲಿದೆಯಂತೆ. ರಾಕ್ ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಭಾರೀ ಬಜೆಟ್ ನಲ್ಲಿಯೇ ತಯಾರು ಆಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಬಿಡುಗಡೆಗೆ ರೆಡಿಯಾಗಿದೆ. ಗರಡಿ ಅರ್ಧಕರ್ಧ ಶೂಟಿಂಗ್ ಮುಗಿಸಿದೆ. ಈ ಎರಡೂ ಚಿತ್ರಗಳು ತೆರೆಗೆ ಬಂದ ಮೇಲೆ ಹೊಸ ಸಿನಿಮಾದ ಕೆಲಸ ಶುರುವಾಗಲಿದೆಯಂತೆ. ಈಗಾಗಲೇ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಯೋಗರಾಜ್ ಭಟ್ ಅವರು ಕಥೆ ಬರೆದಿದ್ದು. ಏಕಕಾಲಕ್ಕೆ ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ಮಾಡಲಿದ್ದಾರಂತೆ ಭಟ್.Sign in to your account
Username or Email Address


Password

 Remember Me


