ಹುಬ್ಬಳ್ಳಿ: ಇಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ 15 ಜನರನ್ನು ಬಂಧಿಸಲಾಗಿದ್ದು, ಒಟ್ಟು 12 FIRಗಳನ್ನು ದಾಖಲಾಗಿದೆ.ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 104 ಜನರನ್ನು ಬಂಧಿಸಲಾಗಿದೆ. ದೇವಸ್ಥಾನ, ಮನೆ ಹಾಗೂ ಪೋಸ್ಟ್ ಆಫೀಸ್ ಮೇಲೆ ಕಲ್ಲು ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಮುಂದುವರೆಸಿದ್ದು, ಬೇರೆ ಕಡೆ ಎಲ್ಲೂ ಗಲಾಟೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ಹಿಂದಿದ್ದಾರಾ ಮೌಲ್ವಿ..?ಪೊಲೀಸ್ ವಾಹನದ ಮೇಲೆ ಮೌಲ್ವಿ ಸೇರಿದಂತೆ ಹಲವರು ಹತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಆರಂಭ ಮಾಡಲಾಗಿದೆ. ತನಿಖೆ ನಂತರ ಎಲ್ಲಾ ಸತ್ಯಾಸತ್ಯತೆ ಗೊತ್ತಾಗಲಿದ್ದು, ಯಾರೆಲ್ಲಾ ಈ ವೇಳೆ ಭಾಗಿಯಾಗಿದ್ದರೂ ಎಂಬುದರ ಬಗ್ಗೆಯೂ ಸಮಗ್ರ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್‍ಗೆ 14 ದಿನ ನ್ಯಾಯಾಂಗ ಬಂಧನSign in to your account
Username or Email Address


Password

 Remember Me


