ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ಮರಳು ಸಾಗಣೆ ಟಿಪ್ಪರ್ ಹರಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮಾರುತಿ (19) ಮೃತ ಯುವಕ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂಭಾಗದಲ್ಲಿ ಮಲಗಿದ್ದ ಮಾರುತಿ ಟಿಪ್ಪರ್‌ಗೆ ಬಲಿಯಾಗಿದ್ದಾನೆ. ಹೊಲದಲ್ಲೆ ಮನೆ ಮಾಡಿಕೊಂಡು ಮಾರುತಿ ಕುಟುಂಬ ಕೃಷಿ ಕೆಲಸ ಮಾಡಿಕೊಂಡಿತ್ತು. ಇವರ ಮನೆ ಎದುರೇ ಮರಳು ಸಂಗ್ರಹಣೆ ಅಡ್ಡಾ ಇದ್ದು, ಹಗಲು ರಾತ್ರಿ ಮರಳು ಸಾಗಣೆ ನಡೆಯುತ್ತದೆ. ನಿನ್ನೆ ರಾತ್ರಿ ಮರಳು ಲೋಡ್ ಬಂದಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಪಂಜಾಬ್‍ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಇಡಿ ಸಂಕಷ್ಟಮಂಜುನಾಥ್ ಹಾಗೂ ಹನುಮಂತ್ ಎನ್ನುವವರು ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಹೊರಗಡೆ ಮಲಗಿದ್ದ ಮಾರುತಿ ಮೇಲೆ ರಾತ್ರಿ ಬಂದ ಟಿಪ್ಪರ್ ಹರಿದು ದುರ್ಘಟನೆ ನಡೆದಿದೆ. ಮಾರುತಿ ಸಾವು ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಮಗಿನ್ನೂ ಅವಕಾಶವಿದೆ: ಹಿಜಬ್‌ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಸಿಎಂಗೆ ವಿದ್ಯಾರ್ಥಿನಿ ಮನವಿSign in to your account
Username or Email Address


Password

 Remember Me


