ಬೆಳಗಾವಿ: ನನ್ನ ಸಿಡಿ ಪ್ರಕರಣ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನೂ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಸಂತೋಷ್ ಮನೆಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕೇಸ್ ಹಿಂದೆಯೂ ‘ಮಹಾನಾಯಕ’ನ ತಂಡ ಕೆಲಸ ಮಾಡುತ್ತಿದೆ. ಹೆಸರು ಹೇಳುವುದು ಬೇಡ. ನನ್ನ ಸಿಡಿ ಕೇಸ್‌ನಲ್ಲಿ ಇದ್ದ ತಂಡವೇ ಸಂತೋಷ ಕೇಸ್‌ನಲ್ಲೂ ಇದೆ. ನನ್ನ ಸಿಡಿ ಕೇಸ್ ಮತ್ತು ಸಂತೋಷ್ ಕೇಸ್‌ನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಂತೋಷ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ: ರಮೇಶ್ ಜಾರಕಿಹೊಳಿಸಚಿವ ಕೆ.ಎಸ್.ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು. ಅವರು ತಪ್ಪು ಮಾಡಿದ್ದರೆ ಗಲ್ಲು ಶಿಕ್ಷೆಯಾಗಲಿ. ಷಡ್ಯಂತ್ರಕ್ಕೆ ಸಿಲುಕಿ ನಾನು ಒಂದು ವರ್ಷದಿಂದ ನೋವು ಅನುಭವಿಸಿದ್ದೇನೆ. ಈಶ್ವರಪ್ಪ ಅವರು ತಪ್ಪು ಮಾಡಿದ್ದರೆ ಕೋರ್ಟ್ ಬೇಕಾದ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.Sign in to your account
Username or Email Address


Password

 Remember Me


