ಕೋಲಾರ: ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವುದು ಬೇಡ. ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ರಾಜೀನಾಮೆ ಅನ್ನೋದು ಗೌರವಯುತವಾದ ಪದ. ಲಾಲ್ ಬಹದ್ದೂರ್ ಶಾಸ್ತ್ರಿ ಕೂಡ ಈ ದೇಶದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ. ರೈಲ್ವೇ ಅಪಘಾತವಾಗಿ ಅಷ್ಟೂ ಜನ ಸತ್ತಾಗ ರಾಜೀನಾಮೆ ಕೊಟ್ಟರು. ಯಶೋದಮ್ಮ ದಾಸಪ್ಪನವರು ಕೂಡ ರಾಜೀನಾಮೆ ಕೊಡ್ತಾರೆ. ಅಷ್ಟು ಗೌರವಯುತವಾದ ಪದವನ್ನು ಇವರಿಗೆ ಬಳಸುವುದು ಬೇಡ. ಇವರು ರಾಜೀನಾಮೆ ಕೊಡುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬ್ಯಾರಿಕೇಡ್ ಹತ್ತಿ ಪೊಲೀಸರ ಮೇಲೆ ಡಿಕೆಶಿ ಜಂಪ್ಇವರನ್ನು ವಜಾಗೊಳಿಸಬೇಕು. ಈಗಾಗಲೆ ಈಶ್ವರಪ್ಪ ರಾಜೀನಾಮೆ ಕುರಿತು ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ. ಅದನ್ನು ಬಿಡಿ ಬಿಡಿಯಾಗಿ ಹೇಳುವ ಅವಶ್ಯಕತೆ ಇಲ್ಲ. ದೇಶದಲ್ಲಿ ಕೋಮು ಗಲಭೆ ಸೃಷ್ಟಿಗೆ ನಾವು ಜೀವಂತ ಇರುವವರೆಗೂ ಅವಕಾಶ ನೀಡಲ್ಲ. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಗೆ ನಾವು ಬಿಡುವುದಿಲ್ಲ. ನಾವು ಕಳೆದು ಹೋದ ಮೇಲೆ ಏನಾಗುತ್ತೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.ಮಧ್ಯೆ ಪ್ರದೇಶ, ಬಿಹಾರ ಬಿಡಿ ರಾಜ್ಯದಲ್ಲಿ ಸಾಮರಸ್ಯದಿಂದ ಬದುಕುತ್ತೇವೆ. ಯಾರು ಏನೇ ಪ್ರಯತ್ನ ಮಾಡಿದರೂ ಅಲ್ಪಸಂಖ್ಯಾತರು, ಧೀನದಲಿತರು, ಬಡವರನ್ನು ಗೌರವಯುತವಾಗಿ ಕರೆದುಕೊಂಡು ಹೋಗುತ್ತೇವೆ. ಪ್ರಾಣ ತ್ಯಾಗ ಮಾಡಲು ನಾವು ಮೊದಲು ನಿಂತಿರುತ್ತೇವೆ. ನಾವು ಸತ್ತರೆ ಅವರಿಗೇನಾದ್ರು ತೊಂದರೆಯಾಗಬಹುದು. ನಾವು ಜೀವಂತವಿದ್ದರೆ ಅವರಿಗೆ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮನ ಭಜನೆ ಮಾಡೋರ ಹೃದಯ ಇಷ್ಟೊಂದು ಕಠೋರವಾಯ್ತಾ: ಲಕ್ಷ್ಮಿ ಹೆಬ್ಬಾಳ್ಕರ್Sign in to your account
Username or Email Address


Password

 Remember Me


