ಚಿಕ್ಕಮಗಳೂರು/ಮೈಸೂರು: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಅತ್ಮಹತ್ಯೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಅಲ್ಲದೆ ಕೆಲವೆಡೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಆದರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಸಚಿವ ಗೋಪಾಲಯ್ಯ ಸಮರ್ಥಿಸಿಕೊಂಡಿದ್ದಾರೆ.ಈಶ್ವರಪ್ಪ ಅವರ ಮೇಲೆ ಬಂದಿರುವ ಆರೋಪ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ರಾಜೀನಾಮೆ ಕೇಳೋದು ಸ್ವಾಭಾವಿಕ. ನಾವು ವಿಪಕ್ಷದಲ್ಲಿದ್ರೂ ಅದೇ ಮಾಡ್ತಾ ಇದ್ವಿ. ಸಿಎಂ ಬೊಮ್ಮಾಯಿ, ಈಶ್ವರಪ್ಪ ಇದ್ದಾರೆ. ಅವರು ವಯಸ್ಸು ಅನುಭವ ಎರಡರಲ್ಲೂ ದೊಡ್ಡವರು. ಸಾರ್ವಜನಿಕ ಜೀವನದಲ್ಲಿ ಅನಿರ್ವಾಯವಾಗಿ ತಲೆಕೊಡುವ ಪರಿಸ್ಥಿತಿ ಬರುತ್ತದೆ. ಸಿಎಂ ಮತ್ತು ಈಶ್ವರಪ್ಪ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿಸಾರ್ವಜನಿಕ ಸಂಶಯ ದೂರಾಗಿಸಲು ಸಿಎಂ, ಈಶ್ವರಪ್ಪ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷದಿಂದ ಯಾವುದೇ ಸೂಚನೆ ನೀಡಿಲ್ಲ. ಮೇಲ್ನೋಟಕ್ಕೆ ಈಶ್ವರಪ್ಪ ಅವರ ಪಾತ್ರ ಕಂಡುಬಂದಿಲ್ಲ. ನಾನು ಹೇಳಿದ್ರೆ ಯಾರೂ ನಂಬಲ್ಲ. ನಾನು ತನಿಖಾ ಏಜೆನ್ಸಿಯಲ್ಲ. ಕಾಂಗ್ರೆಸ್, ಬೇರೆಯವರು ದಾಖಲೆ ಇದ್ರೆ ತನಿಖಾ ಏಜೆನ್ಸಿ ಮುಂದೆ ಸಲ್ಲಿಸಲಿ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸ್ತಾರೆ ಎಂದು ಸವಾಲು ಹಾಕಿದರು.ಸಂತೋಷ್ ಪಾಟೀಲ್ ಸಾವು ದುರದೃಷ್ಟಕರ. ಯಾವುದೇ ಜೀವಕ್ಕೂ ಬೆಲೆ ಇರುತ್ತೆ. ಅವರು ಆತ್ಮಹತ್ಯೆ ದಾರಿ ಹಿಡಿಯಬಾರದಿತ್ತು. ಸಮಗ್ರ ತನಿಖೆಯಾಗಬೇಕು ಸಿಎಂಗೆ ಮನವಿ ಮಾಡ್ತೇನೆ. ಈ ಹಿಂದೆ ಪತ್ರ ಸಂಬಂಧ ಈಶ್ವರಪ್ಪ ಜೊತೆ ಮಾತನಾಡಿದ್ದೆ. ವರ್ಕ್ ಅರ್ಡರ್ ತೆಗೆದುಕೊಂಡಿಲ್ಲ, ಸ್ಯಾಂಕ್ಷನ್ ಅರ್ಡರ್ ಇಲ್ಲ. ಅಧಿಕಾರಿಗಳ ಹತ್ರ ಮಾತನಾಡಿದೆ, ಅವರು ಕೆಲಸ ಮಾಡಿದ್ದೇನೆ ಅಂತಿದ್ದಾರೆ. ವರ್ಕ್ ಅರ್ಡರ್ ಇಲ್ಲದೆ ಹೇಗೆ ಪೇಮೆಂಟ್ ಮಾಡೋದು ಅಂತಿದ್ದಾರೆ ಎಂದು ವಿವರಿಸಿದರು.ಅಧಿಕಾರಿಗಳು ಹೇಳಿದ್ದಾರೆ ಎಂದು ಈಶ್ವರಪ್ಪ ಅವರು ನನ್ನ ಗಮನಕ್ಕೆ ತಂದಿದ್ದರು. ಜನರ ಪ್ರೀತಿಗಳಿಸಲು ಜಾತ್ರೆ ಎಂದು ಕೆಲಸ ಮಾಡಿರುವ ಸಾಧ್ಯತೆಯಿದೆ. ಆದರೆ ಸರ್ಕಾರ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸಬೇಕು. ವರ್ಕ್ ಆರ್ಡರ್ ಇಲ್ಲದೆ ಬಿಲ್ ಕೊಡೋಕೆ ಸಾಧ್ಯವಿಲ್ಲ. ಯಾರ ಮಾತು ಕೇಳಿ ಕೆಲಸ ಮಾಡಿದ ತನಿಖೆಯಿಂದ ಗೊತ್ತಾಗಬೇಕು. ಕೋಟ್ಯಂತರ ರೂ. ಕೆಲಸವನ್ನು ಪಿಸ್ ವರ್ಕ್ ಕೆಲಸ ಮಾಡಿಸಿದ್ದಾರೆ ಎಂದು ಹೇಳೋಕಾಗಲ್ಲ. ವರ್ಕ್ ಆರ್ಡರ್ ಇಲ್ಲದೆ ಕೆಲಸ ಯಾಕೆ ಮಾಡಿದ್ರು ಹೇಗೆ ಮಾಡಿದ್ರು. ಈ ಸಮಗ್ರ ತನಿಖೆಗೆ ಆಗ್ರಹಿಸ್ತೇನೆ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿಇತ್ತ ಮೈಸೂರಿನಲ್ಲಿ ಸಚಿವ ಸಚಿವ ಗೋಪಾಲಯ್ಯ ಅವರು ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಅವರು ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ. ಅವರ ವಿರುದ್ಧ ದೊಡ್ಡ ಪಿತೂರಿ ನಡೆಸಲಾಗಿದೆ. ಈಶ್ವರಪ್ಪ ಜೊತೆ ನಾವೆಲ್ಲರೂ ಇರ್ತೀವಿ. ಅವನಿಗೆ ಯಾರು ಫ್ಲೈಟ್ ಟಿಕೆಟ್ ಮಾಡಿಕೊಟ್ಟಿದ್ದು. ಉಡುಪಿಗೆ ಹೋಗಿ ಯಾಕೆ ಆತ್ಮಹತ್ಯೆ ಮಾಡಿಕೊಂಡ. ಕಂಟ್ರಾಕ್ಟರ್ ಸಂತೋಷ್ ದೆಹಲಿಗೆ ಯಾಕೆ ಹೋದ ಎಂದು ಪ್ರಶ್ನೆ ಕೇಳಿದ್ದು, ಅವನ ಜೊತೆ ಯಾರ್ಯಾರು ಇದ್ರು ಹೀಗೆ ಎಲ್ಲವೂ ಬಯಲಿಗೆ ಬರುತ್ತೆ. ಒಂದಂತೂ ಸ್ಪಷ್ಟ ಈಶ್ವರಪ್ಪ ದೊಡ್ಡ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ ಎಂದು ಈಶ್ವರಪ್ಪ ಪರ ಅವರು ಬ್ಯಾಟಿಂಗ್ ಮಾಡಿದರು.Sign in to your account
Username or Email Address


Password

 Remember Me


