ಕಲಬುರಗಿ: ಹಿಂದೂ ಸಂಘಟನೆಗಳು ಮತ್ತು ರಾಜ್ಯ ಸರ್ಕಾರ ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕೆಡಿಸುವಲ್ಲಿ ಮುಂದಾಗಿವೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಹುಸೇನ್ ಹೇಳಿದರು.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೂ ಸಂಘಟನೆಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ಶಾಲೆಯಲ್ಲಿ ನಡೆದ ವಿಷಯವನ್ನು ಬಿಜೆಪಿ ದುಬ9ಳಕೆ ಮಾಡಿದ್ದಾರೆ. ಹಿಜಬ್, ಹಲಾಲ್ ಕಟ್, ಜಟ್ಕಾ ಕಟ್, ಅಜಾನ್ ಇಂತಹ ವಿಷಯಗಳನ್ನು ಮುನ್ನೆಲೆಗೆ ತಂದು ಶಾಂತಿ ಸೌಹಾರ್ದತೆ ಕೆಡಿಸುತ್ತಿವೆ ಎಂದರು. ಇದನ್ನೂ ಓದಿ: ಈಶ್ವರಪ್ಪನನ್ನು ಸಂಪುಟದಿಂದ ವಜಾಗೊಳಿಸಿ, ಕೂಡಲೇ ಬಂಧಿಸಬೇಕು: ಸಿದ್ದರಾಮಯ್ಯಹಿಂದೂ ಸಂಘಟನೆಗಳು ದೇವಸ್ಥಾನಗಳ ಬಳಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಮಾಡಿದರು. ಮಾವಿನ ಹಣ್ಣು ಕೊಡದಂತೆ ಕರಪತ್ರಗಳನ್ನು ಹಂಚಿದರು. ಹೀಗಾಗಿ ಅಜಾನ್ ಎಲ್ಲ ಧಮ9ದ ದೇವಸ್ಥಾನಗಳಿಗೆ ಅನ್ವಯವಾಗುತ್ತದೆ. ಆದರೆ ರಾಜ್ಯ ಸರ್ಕಾರ ಜನರ ಮುಂದೆ ಕೇವಲ ಅಜಾನ್ ಬಗ್ಗೆ ಮಾತ್ರ ಬಿಂಬಿಸಿತು ಎಂದರು.ಈ ಘಟನೆಗಳು ಎಲ್ಲವನ್ನೂ ನಮ್ಮ ನಾಯಕರಾದ ಕುಮಾರಸ್ವಾಮಿ ಅವರು ತಡೆಯುತ್ತಿದ್ದಾರೆ. ಈ ವಿಷಯಗಳಲ್ಲಿ ಕಾಂಗ್ರೆಸ್ ಮೌನ ವಹಿಸಿದ್ದು, ಹಿಂದೂ-ಮುಸ್ಲಿಂ ವಿಷಯದಲ್ಲಿ ನಮಗೆ ನಷ್ಟ ಆಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಮೌನ ತಾಳಿತು ಎಂದರು. ಇದನ್ನೂ ಓದಿ: ಈಶ್ವರಪ್ಪ ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಪ್ರಿಯಾಂಕ್ ಖರ್ಗೆರಾಜ್ಯ ಸರ್ಕಾರ ಸಣ್ಣ ಪುಟ್ಟ ಸಂಘಟನೆಗಳನ್ನು ಕಡಿವಾಣ ಹಾಕಲು ವಿಫಲವಾಗಿವೆ. ಇದರಿಂದ ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕೆಡಿಸಿವೆ. ಇಂತಹ ಘಟನೆಗಳನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದರು.ರಾಜ್ಯ ಸಕಾ9ರದ ಅಜೆಂಡಾಗಳನ್ನು ನಾವು ಯಶಸ್ವಿಯಾಗಲು ಬಿಡುವುದಿಲ್ಲ. ಆದರೆ ಇವೆಲ್ಲವೂ ಅಜೆಂಡಾಗಳು ಬಿಜೆಪಿ ಅವರಿಗೆ ಬಹುಮುಖ್ಯ ಆಗಿವೆ. ಮುಂದಿನ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ ಎಂದರು.ಧ್ರುವೀಕರಣವು ಉತ್ತರ ಪ್ರದೇಶದ ಮತ್ತು ಇತರೆ ಕಡೆಗಳಲ್ಲಿ ನಡೆಯಬಹುದು. ಆದರೆ ಕನಾ9ಟಕದಲ್ಲಿ ನಡೆಯುವುದಿಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋದರೆ, ಗೆಲ್ಲುವುದು ಸಾಧ್ಯವಿಲ್ಲ ಎಂದರು.Sign in to your account
Username or Email Address


Password

 Remember Me


